ಬೆಂಗಳೂರು: ಯಲಹಂಕದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಫೆಬ್ರವರಿ 5ರಿಂದ ಮೊದಲುಗೊಂಡು ಒಟ್ಟು 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಾಹಿತಿ ನೀಡಿದೆ. ಏರ್ ಶೋ ಕಾರ್ಯಕ್ರಮದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ವಿಮಾನ ಪ್ರಯಾಣಿಕರು ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿರುವ ಸಮಯವನ್ನು ಗಮನಿಸಿಕೊಂಡು ಪ್ರಯಾಣದ ಯೋಜನೆ ರೂಪಿಸುವಂತೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.
ಬೆಂಗಳೂರು ಏರ್ಪೋರ್ಟ್ ಟ್ವೀಟ್
ವಿಮಾನ ನಿಲ್ದಾಣ ಕಾರ್ಯಾಚರಣೆ ಸ್ಥಗಿತದ ವೇಳಾಪಟ್ಟಿ
ಫೆಬ್ರವರಿ 5ರಿಂದ 15ರ ವರೆಗೆ 10 ದಿನಗಳ ಅವಧಿಯಲ್ಲಿ ವಿವಿಧ ಸಮಯಗಳಲ್ಲಿ ಏರ್ಪೋರ್ಟ್ ಕಾರ್ಯಾಚರಣೆ ಬಂದ್ ಆಗಿರಲಿದೆ. ದಿನಾಂಕಗಳು ಮತ್ತು ಏರ್ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.
ಫೆಬ್ರವರಿ 5: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 6: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 7: ಬೆಳಿಗ್ಗೆ 09 ರಿಂದ 11 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 8: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 10 ರಿಂದ 14 ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದ್ದು, ಇದು ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. ಮಿಲಿಟರಿ ಮತ್ತು ನಾಗರಿಕ ವಿಮಾನಯಾನ ತಜ್ಞರು, ಉದ್ಯಮ ವಲಯದ ಪ್ರಮುಖರು ಮತ್ತು ತಂತ್ರಜ್ಞಾನ ಉತ್ಸಾಹಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…