Featured

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ಸಂಚಾರದಲ್ಲಿ ವ್ಯತ್ಯಯ : ವೇಳಾಪಟ್ಟಿ ಇಲ್ಲಿದೆ – vishwanews24

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್ ..

29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತ..

ದಿನಾಂಕ ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ..

ಬೆಂಗಳೂರು: ಯಲಹಂಕದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಫೆಬ್ರವರಿ 5ರಿಂದ ಮೊದಲುಗೊಂಡು ಒಟ್ಟು 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಾಹಿತಿ ನೀಡಿದೆ. ಏರ್ ಶೋ ಕಾರ್ಯಕ್ರಮದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವಿಮಾನ ಪ್ರಯಾಣಿಕರು ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿರುವ ಸಮಯವನ್ನು ಗಮನಿಸಿಕೊಂಡು ಪ್ರಯಾಣದ ಯೋಜನೆ ರೂಪಿಸುವಂತೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.

ಬೆಂಗಳೂರು ಏರ್​ಪೋರ್ಟ್ ಟ್ವೀಟ್

ವಿಮಾನ ನಿಲ್ದಾಣ ಕಾರ್ಯಾಚರಣೆ ಸ್ಥಗಿತದ ವೇಳಾಪಟ್ಟಿ
ಫೆಬ್ರವರಿ 5ರಿಂದ 15ರ ವರೆಗೆ 10 ದಿನಗಳ ಅವಧಿಯಲ್ಲಿ ವಿವಿಧ ಸಮಯಗಳಲ್ಲಿ ಏರ್​ಪೋರ್ಟ್ ಕಾರ್ಯಾಚರಣೆ ಬಂದ್ ಆಗಿರಲಿದೆ. ದಿನಾಂಕಗಳು ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.

ಫೆಬ್ರವರಿ 5: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 6: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 7: ಬೆಳಿಗ್ಗೆ 09 ರಿಂದ 11 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 8: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10 ರಿಂದ 14 ರವರೆಗೆ ಏರೋ ಇಂಡಿಯಾ ಏರ್​ ಶೋ ನಡೆಯಲಿದ್ದು, ಇದು ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. ಮಿಲಿಟರಿ ಮತ್ತು ನಾಗರಿಕ ವಿಮಾನಯಾನ ತಜ್ಞರು, ಉದ್ಯಮ ವಲಯದ ಪ್ರಮುಖರು ಮತ್ತು ತಂತ್ರಜ್ಞಾನ ಉತ್ಸಾಹಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago