Featured

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ಸಂಚಾರದಲ್ಲಿ ವ್ಯತ್ಯಯ : ವೇಳಾಪಟ್ಟಿ ಇಲ್ಲಿದೆ – vishwanews24

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್ ..

29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತ..

ದಿನಾಂಕ ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ..

ಬೆಂಗಳೂರು: ಯಲಹಂಕದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಫೆಬ್ರವರಿ 5ರಿಂದ ಮೊದಲುಗೊಂಡು ಒಟ್ಟು 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಾಹಿತಿ ನೀಡಿದೆ. ಏರ್ ಶೋ ಕಾರ್ಯಕ್ರಮದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವಿಮಾನ ಪ್ರಯಾಣಿಕರು ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿರುವ ಸಮಯವನ್ನು ಗಮನಿಸಿಕೊಂಡು ಪ್ರಯಾಣದ ಯೋಜನೆ ರೂಪಿಸುವಂತೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.

ಬೆಂಗಳೂರು ಏರ್​ಪೋರ್ಟ್ ಟ್ವೀಟ್

ವಿಮಾನ ನಿಲ್ದಾಣ ಕಾರ್ಯಾಚರಣೆ ಸ್ಥಗಿತದ ವೇಳಾಪಟ್ಟಿ
ಫೆಬ್ರವರಿ 5ರಿಂದ 15ರ ವರೆಗೆ 10 ದಿನಗಳ ಅವಧಿಯಲ್ಲಿ ವಿವಿಧ ಸಮಯಗಳಲ್ಲಿ ಏರ್​ಪೋರ್ಟ್ ಕಾರ್ಯಾಚರಣೆ ಬಂದ್ ಆಗಿರಲಿದೆ. ದಿನಾಂಕಗಳು ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.

ಫೆಬ್ರವರಿ 5: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 6: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 7: ಬೆಳಿಗ್ಗೆ 09 ರಿಂದ 11 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 8: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10 ರಿಂದ 14 ರವರೆಗೆ ಏರೋ ಇಂಡಿಯಾ ಏರ್​ ಶೋ ನಡೆಯಲಿದ್ದು, ಇದು ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. ಮಿಲಿಟರಿ ಮತ್ತು ನಾಗರಿಕ ವಿಮಾನಯಾನ ತಜ್ಞರು, ಉದ್ಯಮ ವಲಯದ ಪ್ರಮುಖರು ಮತ್ತು ತಂತ್ರಜ್ಞಾನ ಉತ್ಸಾಹಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago