Featured

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ಸಂಚಾರದಲ್ಲಿ ವ್ಯತ್ಯಯ : ವೇಳಾಪಟ್ಟಿ ಇಲ್ಲಿದೆ – vishwanews24

ಬೆಂಗಳೂರು ವಿಮಾನ ನಿಲ್ದಾಣ : ಫೆ. 5ರಿಂದ 14ರವರೆಗೆ ವಿಮಾನ ನಿಲ್ದಾಣದಲ್ಲಿ ಸಂಚಾರ ಬಂದ್ ..

29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತ..

ದಿನಾಂಕ ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ..

ಬೆಂಗಳೂರು: ಯಲಹಂಕದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಫೆಬ್ರವರಿ 5ರಿಂದ ಮೊದಲುಗೊಂಡು ಒಟ್ಟು 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಾಹಿತಿ ನೀಡಿದೆ. ಏರ್ ಶೋ ಕಾರ್ಯಕ್ರಮದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವಿಮಾನ ಪ್ರಯಾಣಿಕರು ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿರುವ ಸಮಯವನ್ನು ಗಮನಿಸಿಕೊಂಡು ಪ್ರಯಾಣದ ಯೋಜನೆ ರೂಪಿಸುವಂತೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.

ಬೆಂಗಳೂರು ಏರ್​ಪೋರ್ಟ್ ಟ್ವೀಟ್

ವಿಮಾನ ನಿಲ್ದಾಣ ಕಾರ್ಯಾಚರಣೆ ಸ್ಥಗಿತದ ವೇಳಾಪಟ್ಟಿ
ಫೆಬ್ರವರಿ 5ರಿಂದ 15ರ ವರೆಗೆ 10 ದಿನಗಳ ಅವಧಿಯಲ್ಲಿ ವಿವಿಧ ಸಮಯಗಳಲ್ಲಿ ಏರ್​ಪೋರ್ಟ್ ಕಾರ್ಯಾಚರಣೆ ಬಂದ್ ಆಗಿರಲಿದೆ. ದಿನಾಂಕಗಳು ಮತ್ತು ಏರ್​ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.

ಫೆಬ್ರವರಿ 5: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 6: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 7: ಬೆಳಿಗ್ಗೆ 09 ರಿಂದ 11 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 8: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

ಫೆಬ್ರವರಿ 10 ರಿಂದ 14 ರವರೆಗೆ ಏರೋ ಇಂಡಿಯಾ ಏರ್​ ಶೋ ನಡೆಯಲಿದ್ದು, ಇದು ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. ಮಿಲಿಟರಿ ಮತ್ತು ನಾಗರಿಕ ವಿಮಾನಯಾನ ತಜ್ಞರು, ಉದ್ಯಮ ವಲಯದ ಪ್ರಮುಖರು ಮತ್ತು ತಂತ್ರಜ್ಞಾನ ಉತ್ಸಾಹಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

5 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

5 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

6 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

6 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

9 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

9 hours ago