ಬೆಂಗಳೂರು: ಯಲಹಂಕದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಫೆಬ್ರವರಿ 5ರಿಂದ ಮೊದಲುಗೊಂಡು ಒಟ್ಟು 29 ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲಿ ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಾಹಿತಿ ನೀಡಿದೆ. ಏರ್ ಶೋ ಕಾರ್ಯಕ್ರಮದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
ವಿಮಾನ ಪ್ರಯಾಣಿಕರು ಟೇಕಾಫ್, ಲ್ಯಾಂಡಿಂಗ್ ಸ್ಥಗಿತಗೊಳ್ಳಲಿರುವ ಸಮಯವನ್ನು ಗಮನಿಸಿಕೊಂಡು ಪ್ರಯಾಣದ ಯೋಜನೆ ರೂಪಿಸುವಂತೆ ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಸಲಹೆ ನೀಡಿದೆ.
ಬೆಂಗಳೂರು ಏರ್ಪೋರ್ಟ್ ಟ್ವೀಟ್
ವಿಮಾನ ನಿಲ್ದಾಣ ಕಾರ್ಯಾಚರಣೆ ಸ್ಥಗಿತದ ವೇಳಾಪಟ್ಟಿ
ಫೆಬ್ರವರಿ 5ರಿಂದ 15ರ ವರೆಗೆ 10 ದಿನಗಳ ಅವಧಿಯಲ್ಲಿ ವಿವಿಧ ಸಮಯಗಳಲ್ಲಿ ಏರ್ಪೋರ್ಟ್ ಕಾರ್ಯಾಚರಣೆ ಬಂದ್ ಆಗಿರಲಿದೆ. ದಿನಾಂಕಗಳು ಮತ್ತು ಏರ್ಪೋರ್ಟ್ ಕಾರ್ಯಾಚರಣೆ ಸ್ಥಗಿತವಾಗಲಿರುವ ಸಮಯದ ಮಾಹಿತಿ ಇಲ್ಲಿದೆ.
ಫೆಬ್ರವರಿ 5: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 6: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 7: ಬೆಳಿಗ್ಗೆ 09 ರಿಂದ 11 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 8: ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 4:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 10 ರಿಂದ 14 ರವರೆಗೆ ಏರೋ ಇಂಡಿಯಾ ಏರ್ ಶೋ ನಡೆಯಲಿದ್ದು, ಇದು ವಿಶ್ವದ ಅತಿದೊಡ್ಡ ವೈಮಾನಿಕ ಪ್ರದರ್ಶನಗಳಲ್ಲಿ ಒಂದಾಗಿದೆ. ಮಿಲಿಟರಿ ಮತ್ತು ನಾಗರಿಕ ವಿಮಾನಯಾನ ತಜ್ಞರು, ಉದ್ಯಮ ವಲಯದ ಪ್ರಮುಖರು ಮತ್ತು ತಂತ್ರಜ್ಞಾನ ಉತ್ಸಾಹಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…