Featured

ಬೆಂಗಳೂರು : ವೀಕೆಂಡ್ ಕರ್ಪ್ಯೂ : ಜನಸಾಮಾನ್ಯರಿಗೆ ಬಿಎಂಟಿಸಿ ಬಸ್ ಸಂಚಾರ ಲಭ್ಯವಿರೋದಿಲ್ಲ – Vishwanews24

ಬೆಂಗಳೂರು : ವೀಕೆಂಡ್ ಕರ್ಪ್ಯೂ : ಜನಸಾಮಾನ್ಯರಿಗೆ ಬಿಎಂಟಿಸಿ ಬಸ್ ಸಂಚಾರ ಲಭ್ಯವಿರೋದಿಲ್ಲ – Vishwanews24

ಅಗತ್ಯ ಸೇವೆಗಳಿಗೆ ಮಾತ್ರ ಬಿಎಂಟಿಸಿ ಬಸ್‌ ಸಂಚಾರ..

ಬೆಂಗಳೂರು: ಬಿಎಂಟಿಸಿಯ ಬಸ್  ಸಂಚಾರ ಶನಿವಾರ ಮತ್ತು ಭಾನುವಾರದ ವಾರಾಂತ್ಯ ಕರ್ಪ್ಯೂ  ಸಂದರ್ಭದಲ್ಲಿ ಸಾರ್ವಜನಿಕ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ. ಈ ಮೂಲಕ ಬಿಎಂಟಿಸಿ ಬಸ್ ಸಂಚಾರ ವೀಕೆಂಡ್ ಕರ್ಪ್ಯೂನಲ್ಲಿ ಲಭ್ಯವಿರೋದಿಲ್ಲ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬಿಬಿಎಂಪಿ ಪ್ರದೇಶ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೋನಾ ಕೇಸ್ ಹರಡುವಿಕೆ ನಿಯಂತ್ರಿಸೋದಕ್ಕಾಗಿ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ. ಜನವರಿ 8, 9 ಮತ್ತು ಜ.15, 16ರ ಶನಿವಾರ, ಭಾನುವಾರ ಜಾರಿಗೊಳಿಸಲಾಗಿರುವಂತ ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಬಿಎಂಟಿಸಿ ಬಸ್ ನಲ್ಲಿ ಸಾರ್ವಜನಿಕ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

ಇನ್ನೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಶೇ.10ರಷ್ಟು ಅಗತ್ಯ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಬಿಎಂಟಿಸಿ ಬಸ್ ಅಗತ್ಯ ಸೇವೆಗಳನ್ನು ಒದಗಿಸುವಂತ ಇಲಾಖೆಗಳು, ಜನರ ಸೇವೆಗಾಗಿ ಲಭ್ಯವಿರಲಿದೆ ಎಂದು ತಿಳಿಸಿದೆ.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

1 day ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

1 day ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

1 day ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

1 day ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

1 day ago