ಬೆಂಗಳೂರು: ಬಿಎಂಟಿಸಿಯ ಬಸ್ ಸಂಚಾರ ಶನಿವಾರ ಮತ್ತು ಭಾನುವಾರದ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಸಾರ್ವಜನಿಕ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ. ಈ ಮೂಲಕ ಬಿಎಂಟಿಸಿ ಬಸ್ ಸಂಚಾರ ವೀಕೆಂಡ್ ಕರ್ಪ್ಯೂನಲ್ಲಿ ಲಭ್ಯವಿರೋದಿಲ್ಲ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬಿಬಿಎಂಪಿ ಪ್ರದೇಶ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೋನಾ ಕೇಸ್ ಹರಡುವಿಕೆ ನಿಯಂತ್ರಿಸೋದಕ್ಕಾಗಿ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ. ಜನವರಿ 8, 9 ಮತ್ತು ಜ.15, 16ರ ಶನಿವಾರ, ಭಾನುವಾರ ಜಾರಿಗೊಳಿಸಲಾಗಿರುವಂತ ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಬಿಎಂಟಿಸಿ ಬಸ್ ನಲ್ಲಿ ಸಾರ್ವಜನಿಕ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.
ಇನ್ನೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಶೇ.10ರಷ್ಟು ಅಗತ್ಯ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಬಿಎಂಟಿಸಿ ಬಸ್ ಅಗತ್ಯ ಸೇವೆಗಳನ್ನು ಒದಗಿಸುವಂತ ಇಲಾಖೆಗಳು, ಜನರ ಸೇವೆಗಾಗಿ ಲಭ್ಯವಿರಲಿದೆ ಎಂದು ತಿಳಿಸಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…