ಬೆಂಗಳೂರು: ವೈದ್ಯೆಯ ರೀತಿ ವೇಷ ಧರಿಸಿ ಆಸ್ಪತ್ರೆಯಲ್ಲಿದ್ದ ರೋಗಿಗಳ ಚಿನ್ನಾಭರಣ ಕಳವು ಮಾಡುತ್ತಿದ್ದ ಲಕ್ಷ್ಮಿಯನ್ನು ಬಂಧಿಸಲಾಗಿದೆ.
ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಘಟನೆ ನಡೆದಿತ್ತು. ಕಳೆದ ಕೆಲ ದಿನಗಳ ಹಿಂದೆ ವೈದ್ಯೆಯ ರೀತಿಯಲ್ಲಿ ಡ್ರೆಸ್ ಮಾಡಿಕೊಂಡು ಆಸ್ಪತ್ರೆ ಎಂಟ್ರಿಯಾಗಿದ್ದ ಕಳ್ಳಿ ಲಕ್ಷ್ಮಿ, ರೋಗಿಗಳ ವಾರ್ಡ್ ಗೆ ಹೋಗುತ್ತಿದ್ದಳು. ಬಳಿಕ ರೋಗಿಯ ಜೊತೆಗಿದ್ದವರನ್ನು ಚಿಕಿತ್ಸೆ ಕೊಡುವ ವೇಳೆ ಯಾರು ಒಳಗೆ ಇರಬಾರದು ಅಂತಾ ಹೊರಗೆ ಕಳುಹಿಸುತ್ತಿದ್ದಳು. ಹಾಗೆಯೇ ಹೊರಗೆ ಕಳುಹಿಸಿ ಚಿಕಿತ್ಸೆ ಕೊಡುವ ನೆಪದಲ್ಲಿ ರೋಗಿಗಳ ಬಳಿಯಿದ್ದ ಚಿನ್ನಾಭರಣ ಕಳವು ಮಾಡಿ ಎಸ್ಕೇಪ್ ಆಗುತ್ತಿದ್ದಳು.
ರೋಗಿ ಸರಸಮ್ಮ ಅನ್ನೋರ ಬಳಿ ಇದೇ ವಂಚಿಸಿ 40 ಗ್ರಾಂ ಚಿನ್ನದ ಸರ ಕಳವು ಮಾಡಿದ್ದಳು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ನಕಲಿ ಡಾಕ್ಟರ್ ಲಕ್ಷ್ಮಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆರೋಪಿತೆ ಲಕ್ಷ್ಮಿಯ ಖಾಸಗಿ ಫೋಟೋ (Photo) ಇಟ್ಟುಕೊಂಡು ಹಣ ತರುವಂತೆ ಬ್ಲಾಕ್ ಮೇಲ್ ಮಾಡ್ತಿದ್ದ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಕಳ್ಳತನ ಮಾಡಿದಳು ಅನ್ನೋದು ಬೆಳಕಿಗೆ ಬಂದಿದೆ. ಸದ್ಯ ಆ ವ್ಯಕ್ತಿಯ ಬಂಧನಕ್ಕೆ ಪೊಲೀಸರು, ಶೋಧ ನಡೆಸಿದ್ದಾರೆ.
Join our Whatsapp group by clicking the below link 👇👇
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…