ಬೆಂಗಳೂರು : ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವು ಮತದಾರರು ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂ ಪ್ರೇರಿತರಾಗಿ ಆಧಾರ್ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ತಿಳಿಸಿದೆ.
ಆಗಸ್ಟ್ 9 ರಂದು ರಾಜ್ಯದ ಎಲ್ಲ ಮತದಾರರು ತಮ್ಮ ಮತದಾನ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರ್ನ್ನು ಲಿಂಕ್ ಮಾಡಿಕೊಳ್ಳಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಸುತ್ತೋಲೆಯಲ್ಲಿ “ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಮತದಾರರ ಗುರುತಿನ ಚೀಟಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು, ಎಲ್ಲಾ ಮತದಾರರು ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಮತ್ತು ನಿಮ್ಮ ಸ್ನೇಹಿತರ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರನ್ನು ಲಿಂಕ್ ಮಾಡಿಕೊಳ್ಳಲು ಕೋರಿದೆ ಎಂದು”, ಕಂದಾಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿತ್ತು.
ಹೃದಯಾಘಾತದಿಂದ ನಟಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ – Vishwanews24
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…