ಬೆಂಗಳೂರು : ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವು ಮತದಾರರು ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂ ಪ್ರೇರಿತರಾಗಿ ಆಧಾರ್ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ತಿಳಿಸಿದೆ.
ಆಗಸ್ಟ್ 9 ರಂದು ರಾಜ್ಯದ ಎಲ್ಲ ಮತದಾರರು ತಮ್ಮ ಮತದಾನ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರ್ನ್ನು ಲಿಂಕ್ ಮಾಡಿಕೊಳ್ಳಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಸುತ್ತೋಲೆಯಲ್ಲಿ “ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಮತದಾರರ ಗುರುತಿನ ಚೀಟಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು, ಎಲ್ಲಾ ಮತದಾರರು ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಮತ್ತು ನಿಮ್ಮ ಸ್ನೇಹಿತರ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರನ್ನು ಲಿಂಕ್ ಮಾಡಿಕೊಳ್ಳಲು ಕೋರಿದೆ ಎಂದು”, ಕಂದಾಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿತ್ತು.
ಹೃದಯಾಘಾತದಿಂದ ನಟಿ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ನಿಧನ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…