ಬೆಂಗಳೂರು: ಬಾಂಗ್ಲಾ ದೇಶದಿಂದ ಬಂದು, ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಮಹಿಳೆಯೊಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಭಾರತೀಯ ಪೌರತ್ವ ಪಡೆದಿದ್ದ ಮಹಿಳೆಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರೋನಿ ಬೇಗಂ 2006 -2007 ರಲ್ಲಿ ಅಕ್ರಮವಾಗಿ ಗಡಿ ನುಸುಳಿ ಭಾರತದೊಳಕ್ಕೆ ಪ್ರವೇಶಿಸಿದ್ದಳು ,ರೋನಿ ಬೇಗಂ 2015 ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದಳು.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಟೈಲರಿಂಗ್ ಮಾಡಿಕೊಂಡಿದ್ದ ಸದರಿ ವಿದೇಶಿ ಮಹಿಳೆ, ನೀತಿನ್ ಕುಮಾರ್ ಎಂಬಾತನನ್ನು ಮುಂಬೈನಲ್ಲಿ ವಿವಾಹವಾಗಿದ್ದಳು. ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದ ರೋನಿ ಬೇಗಂ ತನ್ನ ಹೆಸರು ಬದಲಿಸಿಕೊಂಡಿದ್ದಳು. ಪಾಯಲ್ ಗೋಷ್ ಎಂದು ಆಕೆಗೆ ಮರು ನಾಮಕರಣವಾಗಿತ್ತು. ನಕಲಿ ದಾಖಲೆ ಕೊಟ್ಟು ಭಾರತದ ಪ್ರಜೆಯಾಗಿ ದಾಖಲೆ ಮಾರ್ಪಾಡು ಮಾಡಿಕೊಂಡಿದ್ದಳು. ಬಾಂಗ್ಲಾಗೆ ಪ್ರಯಾಣ ಮಾಡುವಾಗ ಏರ್ ಪೋರ್ಟ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾಳೆ.
ನಕಲಿ ದಾಖಲೆ ಮುಖಾಂತರ ಓಟರ್ ಐಡಿ, ಆಧಾರ್ ಕಾರ್ಡ್ ಸಹ ರೋನಿ ಬೇಗಂ ಯಾನಿ ಪಾಯಲ್ ಗೋಷ್ ಪಶ್ಚಿಮ ಬಂಗಾಳದ ಏರ್ ಪೋರ್ಟ್ ನಲ್ಲಿ ಲಾಕ್ ಆಗಿದ್ದಾಳೆ. FRRO ಸೂಚನೆ ಮೇರೆಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಒಂದೂವರೆ ವರ್ಷದ ನಂತರ ರೋನಿ ಬೇಗಂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ರೋನಿ ಬೇಗಂ ಯಾನಿ ಪಾಯಲ್ ಗೋಷ್ ಎಂಬ ಈ ಮಹಿಳೆಗೆ ಅಕ್ರಮವಾಗಿ ದಾಖಲಾತಿ ಮಾಡಿಕೊಟ್ಟವರಿಗೂ ಬೆಂಗಳೂರು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ :
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…