ಬೆಂಗಳೂರು: ನಗರದ ಮಾಗಡಿ ರಸ್ತೆಯಲ್ಲಿ ಇಂದು ದೆಹಲಿಯ ಕಾರ್ ಬೈಕ್ ಗೆ ಹಿಟ್ ಅಂಡರ್ ರನ್ ಮಾದರಿಯಲ್ಲಿಯೇ ಭೀಕರ ಅಮಾನವೀಯ ಕೃತ್ಯವೊಂದು ನಡೆದಿದೆ. ಕಾರ್ ಗೆ ಡಿಕ್ಕಿಯಾಗಿದ್ದಕ್ಕೆ ಗಲಾಟೆ ಮಾಡಿ ಬೈಕ್ ಹಿಂಪದಿ ಹಿಡಿದಂತ ವ್ಯಕ್ತಿಯನ್ನೇ ಒಂದು ಕಿಲೋಮೀಟರ್ ದೂರದವರೆಗೆ ಬೈಕ್ ಸವಾರ ಎಳೆದೊಯ್ದಿರೋ ಡೆಡ್ಲಿ ಕೃತ್ಯ ನಡೆದಿದೆ.
ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಲ್ಲಿ ಬೈಕ್ ಸವಾರನೊಬ್ಬ ಟಾಟಾ ಸುಮೋಗೆ ಡಿಕ್ಕಿ ಹೊಡೆದಿದ್ದನು. ಈ ವೇಳೆ ಸುಮೋ ಚಾಲಕ ಬೈಕ್ ಸವಾರನನ್ನು ಪ್ರಶ್ನಿಸಿ, ಗಲಾಟೆ ಮಾಡಿದ್ದಾನೆ. ಈ ವೇಳೆ ಬೈಕ್ ಸವಾರ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆತನ ಬೈಕ್ ಸೀಟ್ ಹಿಂಪದಿಯ ಹಿಡಿಯನ್ನು ಜಗ್ಗಿ ಹಿಡಿದಿದ್ದಾನೆ.
ಇದನ್ನೂ ಲೆಕ್ಕಿಸದೇ ಬೈಕ್ ಸವಾರ ಮಾತ್ರ ಮಾಗಡಿ ರಸ್ತೆ ಟೋಲ್ ಗೇಟ್ ನಿಂದ ಹೊಸಳ್ಳಿ ಮೆಟ್ರೋ ನಿಲ್ದಾಣದವರೆಗೆ ಸುಮಾರು ಒಂದು ಕಿಲೋಮೀಟರ್ ದೂರು ರಸ್ತೆಯಲ್ಲಿ ಧರಧರ ಎಳೆದೊಯ್ದಿದ್ದಾನೆ.
ಇದನ್ನು ಗಮನಿಸಿದಂತ ಸಾರ್ವಜನಿಕರು, ಬೈಕ್ ಸವಾರನನ್ನು ತಡೆದು, ಪ್ರಶ್ನಿಸಿದ್ದಾರೆ. ಅಲ್ಲದೇ ಅಮಾನವೀಯ ರೀತಿಯಲ್ಲಿ ವಯಸ್ಸಾಗಿದ್ದಂತ ಕಾರು ಚಾಲಕ ಬೈಕ್ ಹಿಂದೆ ಹಿಡಿದಿದ್ದರೂ ಎಳೆದೊಯ್ದು ಕೃತ್ಯವೆಸಗಿದಂತ ಬೈಕ್ ಸವಾರನಿಗೆ ಧರ್ಮದೇಟು ನೀಡಿದರು.
ಸಾರ್ವಜನಿಕರ ಒಡೆತದಿಂದಾಗಿ ಬೈಕ್ ಸವಾರ ಅಸ್ವಸ್ಥಗೊಂಡಿದ್ದನು. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಬೈಕ್ ಸವಾರ, ಕಾರು ಚಾಲಕ ಇಬ್ಬರನ್ನು ಆಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದರು.
Join our Whatsapp group by clicking the below link 👇👇
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…