Featured

ಬೆಂಗಳೂರು : ಹೆಂಡತಿಗೆ ತನ್ನ ಸ್ನೇಹಿತರ ಜೊತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಬೆದರಿಸಿ , ಖಾಸಗಿ ದೃಶ್ಯ ಮೊಬೈಲ್‌ನಲ್ಲಿ ಸೆರೆಹಿಡಿದು ಬ್ಲಾಕ್​ಮೇಲ್ ಮಾಡಿದ ಪತಿ – VIshwanews24

ಬೆಂಗಳೂರು: ಹೆಂಡತಿಗೆ ತನ್ನ ಸ್ನೇಹಿತರ ಜೊತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಬೆದರಿಸಿದ ಪತಿ..

ಖಾಸಗಿ ದೃಶ್ಯ ಮೊಬೈಲ್‌ನಲ್ಲಿ ಸೆರೆಹಿಡಿದು ಬ್ಲಾಕ್​ಮೇಲ್ ..

ಪತಿಯ ಕಿರುಕುಳಕ್ಕೆ ಬೇಸತ್ತ ಮಹಿಳೆಯಿಂದ ಪೊಲೀಸರಿಗೆ ದೂರು

ಬೆಂಗಳೂರು: ಪತಿ ಮಹಾಶಯ ತನ್ನ ಸ್ನೇಹಿತರ ಜತೆಗೆ ಹಾಸಿಗೆ ಹಂಚಿಕೊಳ್ಳುವಂತೆ ಬೆದರಿಸಿ, ಆ ಖಾಸಗಿ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಟೆಕ್ಕಿ ಪತ್ನಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಥಣಿಸಂದ್ರದ ನಿವಾಸಿ 34 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಆಕೆಯ ಪತಿ ಜಾನ್ (36) ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರುದಾರ ಮಹಿಳೆಯು 2011ರಲ್ಲಿ ಪತಿ ಜಾನ್‌ನನ್ನು ವಿವಾಹವಾಗಿದ್ದರು. ದಂಪತಿಗೆ ಒಬ್ಬ ಮಗನಿದ್ದಾನೆ. ಮದುವೆಯಾದಾಗಿನಿಂದ ಜಾನ್ ಮದ್ಯಪಾನ ಮಾಡಿ ಬಂದು ಹಲ್ಲೆ ನಡೆಸಿ ಹಿಂಸೆ ಕೊಡುತ್ತಿದ್ದ.

2015ರಲ್ಲಿ ತನ್ನ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯ ಮಾಡುತ್ತಿದ್ದು ನಾನು ಒಪ್ಪದಿದ್ದಾಗ ಹಲ್ಲೆ ನಡೆಸಿ ಹಿಂಸೆ ಕೊಡುತ್ತಿದ್ದ. ಪತಿಯ ಹಿಂಸೆ ತಾಳಲಾರದೇ ಪತಿಯ ಇಬ್ಬರು ಸ್ನೇಹಿತರ ಜತೆಗೆ ಹಲವಾರು ಬಾರಿ ದೈಹಿಕ ಸಂಪರ್ಕ ಹೊಂದಿದ್ದೇನೆ. ಪತಿಯ ಸ್ನೇಹಿತರ ಜೊತೆಗೆ ಕಳೆದ ಖಾಸಗಿ ಕ್ಷಣಗಳ ವಿಡಿಯೋ ಹಾಗೂ ಫೋಟೊವನ್ನು ಪತಿ ಜಾನ್‌ ತನಗೆ ಗೊತ್ತಾಗದಂತೆ ಆತನ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದ. ಇತ್ತೀಚೆಗೆ ನನಗೆ ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವುದು ಇಷ್ಟವಾಗದೇ ಇದರಿಂದ ದೂರ ಉಳಿದಿದ್ದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದಾರೆ.

ವಿಚ್ಛೇದನ ಕೇಳಿದಕ್ಕೆ ಬ್ಲಾಕ್‌ಮೇಲ್: ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ನನ್ನ ಸಹೋದರಿ 2019ರಿಂದ ನಮ್ಮೊಂದಿಗೆ ವಾಸಿಸುತ್ತಿದ್ದಳು. ಇಷ್ಟಕ್ಕೆ ಸುಮ್ಮನಾಗದ ಪತಿ ನಿನ್ನ ತಂಗಿಯನ್ನು ನನ್ನ ಜೊತೆ ಮಲಗಲು ಹೇಳು ಎಂದು ಒತ್ತಾಯಿಸುತ್ತಿದ್ದ. ಇದರಿಂದ ಮನನೊಂದು ಪತಿಯಿಂದ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿದ್ದೆ.

ವಿಚ್ಛೇದನ ಕೇಳಿದಾಗಲೆಲ್ಲಾ ಖಾಸಗಿ ವಿಡಿಯೋ ಮತ್ತು ಫೋಟೋ ತೋರಿಸಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಸಿದ್ದ. ಡಿ.4ರಂದು ಮತ್ತೆ ವಿಚ್ಛೇದನ ಕೇಳಿದಾಗ 2 ಖಾಸಗಿ ಫೋಟೋಗಳನ್ನು ನನ್ನ ವಾಟ್ಸ್​ಆಯಪ್​​ಗೆ ಕಳುಹಿಸಿದ್ದ. ಇವುಗಳನ್ನು ನಿನ್ನ ಸ್ನೇಹಿತರಿಗೆ, ನಿನ್ನ ತಂದೆ ತಾಯಿಗೆ ಕಳುಹಿಸಿ, ಇಂಟರ್ನೆಟ್ ಗ್ರೂಪ್‌ಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಸಿದ್ದಾನೆ. ಪತಿ ಮದ್ಯಪಾನದ ಜತೆಗೆ ಗಾಂಜಾ ಸೇವನೆ ಮಾಡುತ್ತಿದ್ದು, ಮನೆಯಲ್ಲಿ 2 ಪಾಟ್‌ಗಳಲ್ಲಿ ಗಾಂಜಾ ಸಸ್ಯ ಬೆಳೆಸಿದ್ದಾನೆ ಎಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago