Featured

ಬೆಂಗಳೂರು : ಹೆಲ್ಮೆಟ್ ಹಾಕಿರದಿದ್ದರೆ, ಪೆಟ್ರೋಲ್ ಇಲ್ಲ ; ಹೊಸ ನಿಯಮ ಜಾರಿಗೆ -Vishwanews24

ಬೆಂಗಳೂರು: ವಾಹನಸವಾರರ ಮತ್ತು ರಸ್ತೆ ಸುರಕ್ಷತೆ ಉದ್ದೇಶದಿಂದ ‘ಹೆಲ್ಮೆಟ್ ಹಾಕಿರದಿದ್ದರೆ, ಪೆಟ್ರೋಲ್ ಇಲ್ಲ’ ಎಂಬ ನಿಯಮವನ್ನು ನಗರ ವ್ಯಾಪಿ ಸೋಮವಾರದಿಂದಲೇ ಜಾರಿಗೆ ತರಲಾಗಿದೆ.

ಮೋಟಾರು ವಾಹನ ಕಾಯ್ದೆ-1988 ಕಲಂ 129ರ ಪ್ರಕಾರ ದ್ವಿಚಕ್ರ ವಾಹನಸವಾರ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವುದು ಕಡ್ಡಾಯ. ನಗರದಲ್ಲಿ ಕಳೆದ 10 ವರ್ಷದಿಂದ ಹೆಲ್ಮೆಟ್ ಕಡ್ಡಾಯ ನಿಯಮ ಜಾರಿಗೊಳಿಸಲಾಗಿದೆ. ಆದರೆ ಆದೇಶವಿದ್ದರು ಇದ್ದರು ಕೂಡ ಈ ಬಗ್ಗೆ ವಾಹನ ಸವಾರರು ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇರುವುದು ಆತಂಕಕಾರಿಯಾಗಿದೆ ಅಂತ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಹೆಲ್ಮೆಟ್ ಇಲ್ಲದಿದ್ದರೆ ಪೆಟ್ರೋಲ್ ಸಿಗಲ್ಲ ಎನ್ನುವ ವಿಷಯಕ್ಕೆ ಸಂಬಂಧಪಟ್ಟಂತೆ ಸಹಕಾರ ನೀಡುವ ನಿಟ್ಟಿನಲ್ಲಿ ನಗರದಲ್ಲಿರುವ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ, ರಿಲಯನ್ಸ್, ಶೆಲ್ ಸೇರಿ ಎಲ್ಲ ಪೆಟ್ರೋಲ್ ಬಂಕ್​ಗಳ ಮಾಲೀಕರಿಗೆ ಪತ್ರ ಬರೆದು ಸಹಕಾರ ನೀಡುವಂತೆ ಕೋರಲಾಗುತ್ತದೆ. ಈ ಸಂಬಂಧ ಆದೇಶವನ್ನು ಹೊರಡಿಸಲಾಗುತ್ತದೆ ಅಂತ ಹರಿಶೇಖರ್‌ ಅವರು ಹೇಳಿದ್ದಾರೆ.

ಈ ನಿಯಮ ಈಗಾಗಲೇ ಕೇರಳ, ಆಂಧ್ರ ಸೇರಿದಂತೆ ದೇಶದ ವಿವಿಧೆಡೆ ಜಾರಿಯಾಗಿದೆ. ಇದರ ಪ್ರಕಾರ ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಬೇಕು ಎಂದರೆ ಹೆಲ್ಮೆಟ್ ಇರಲೇಬೇಕು. ಒಂದು ವೇಳೆ ನಿಮ್ಮ ಬಳಿ ಹೆಲ್ಮೆಟ್ ಇಲ್ಲ ಎಂದರೆ ಬಂಕ್‍ನವರು ನಿಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕುವುದಿಲ್ಲ. ಬೆಂಗಳೂರಲ್ಲಿ ಬೈಕ್ ಅಪಘಾತದಿಂದ ಹೆಚ್ಚುತ್ತಿರುವ ಸಾವು-ನೋವು ತಡೆಗೆ ಈ ಹೊಸ ನಿಯಮವನ್ನು ತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago