Featured

ಬೆಂಗಳೂರು : ಹೈಕೋರ್ಟ್ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು : ಬಿ.ವೈ.ವಿಜಯೇಂದ್ರ ಆಗ್ರಹ – vishwanews24

ಬೆಂಗಳೂರು : ಹೈಕೋರ್ಟ್ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು : ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ಮಾನ್ಯ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದ್ದಾರೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್ ತಿಳಿಸಿದೆ ಎಂದು ವಿಜಯೇಂದ್ರ ವಿಶ್ಲೇಷಿಸಿದರು.

ಹೈಕೋರ್ಟ್‍ನಲ್ಲಿ ಸುದೀರ್ಘ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಗೌರವಾನ್ವಿತ ರಾಜ್ಯಪಾಲರು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಶನ್‍ಗೆ ಅನುಮತಿ ಕೊಟ್ಟಿದ್ದರು. ಕಾಂಗ್ರೆಸ್ಸಿಗರು ಗೌರವಾನ್ವಿತ ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್ ಎಂದು ಆಕ್ಷೇಪಿಸಿದ್ದರು ಎಂದು ಟೀಕಿಸಿದರು.

ಕಳೆದ ಕೆಲವು ತಿಂಗಳಿನಿಂದ ಬಿಜೆಪಿ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಿರಂತರ ಹೋರಾಟ ನಡೆಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ಮಾಡಿದ್ದೆವು. ನಂತರ ಸ್ವತಃ ಸಿಎಂ ಕುಟುಂಬವೇ ಫಲಾನುಭವಿಗಳಾಗಿರುವ ಮೈಸೂರಿನ ಮುಡಾ ಹಗರಣ ವಿರುದ್ಧ ಹೋರಾಟ ಹಮ್ಮಿಕೊಂಡಿದ್ದೆವು. ಬೆಂಗಳೂರು- ಮೈಸೂರು ಪಾದಯಾತ್ರೆಯನ್ನು ನಡೆಸಿ ಬಿಜೆಪಿ- ಜೆಡಿಎಸ್ ಒಟ್ಟಾಗಿ ಯಶಸ್ವಿ ಹೋರಾಟ ಮಾಡಿದ್ದಾಗಿ ವಿಜಯೇಂದ್ರ ವಿವರಿಸಿದರು.

ಗೌರವಾನ್ವಿತ ರಾಜ್ಯಪಾಲರಿಗೆ ಅನೇಕ RTI ಕಾರ್ಯಕರ್ತರು ಖಾಸಗಿ ದೂರು ನೀಡಿದ್ದರು. ಸೂಕ್ತ ತನಿಖೆ ನಡೆಸಲು ಒತ್ತಾಯಿಸಿದ್ದರು ಎಂದು ಅವರು ತಿಳಿಸಿದರು. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದರು ಎಂದ ಅವರು, ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಭ್ರಷ್ಟಾಚಾರದ ಕಳಂಕ ಹೊತ್ತ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು. ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವ ವಿಶ್ವಾಸ ಇದೆ. ಅವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಮುಡಾ ವಿಚಾರದಲ್ಲಿ ತಮ್ಮ ಪಾತ್ರ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಬಳಿಕ ರಾಜಭವನ, ರಾಜ್ಯಪಾಲರ ವಿರುದ್ಧ ತೇಜೋವಧೆ ಮಾಡಿದ್ದರು. ಈಗ ಹೈಕೋರ್ಟ್ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಆದ್ದರಿಂದ ಸಿಎಂ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ನಮ್ಮ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ ಎಂದೂ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಪಕ್ಷದ ಮುಂದಿನ ನಡೆಯ ಕುರಿತು ಪ್ರಮುಖರು, ಹಿರಿಯರ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದು ವಿಜಯೇಂದ್ರ ಉತ್ತರ ನೀಡಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago