Featured

ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಬೆಟ್ಟದ ಬಳಿ ಧಾರುಣ ಘಟನೆ ;ಪ್ರೇಯಸಿ ಜೊತೆ ಬಂದಿದ್ದ ಪ್ರೇಮಿಯ ಮುಂಗೈ ಕತ್ತರಿಸಿ, ಕೈ ಸಮೇತ ದುಷ್ಕರ್ಮಿಗಳು ಪರಾರಿ!

ಬೆಂಗಳೂರು: ಪ್ರೇಯಸಿಯ ಜೊತೆ ಪ್ರವಾಸಕ್ಕೆ ಬಂದಿದ್ದ ಪ್ರೇಮಿಯೊಬ್ಬನ ಮುಂಗೈಯನ್ನು ಕತ್ತರಿಸಿ ಅದರೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟದ ಬೆಟ್ಟದ ಬಳಿ ಈ ಧಾರುಣ ಘಟನೆ ನಡೆದಿದ್ದು, ಚಿತ್ರದುರ್ಗ ಮೂಲದ ರವೀಶ್ (23 ವರ್ಷ) ಕೈ ಕಳೆದುಕೊಂಡ ಪ್ರೇಮಿ. ರವೀಶ್ ಆನೇಕಲ್ ತಾಲೂಕಿನ ಯಾರಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಆತನೊಂದಿಗೆ ಇದ್ದ ಯುವತಿ ಕೂಡ ಚಿತ್ರದುರ್ಗದ ಮೂಲದವಳಾಗಿದ್ದು, ನಗರದಲ್ಲಿಯೇ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಏನಿದು ಘಟನೆ?
ಸಂತ್ರಸ್ಥ ರವೀಶ್ ಮತ್ತು ಆತನ ಪ್ರೇಯಸಿ ಇಬ್ಬರು ಸೇರಿ ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ದೇವಾಲಯದ ಹಿಂಭಾಗದಿಂದ ಸುವರ್ಣಮುಖಿ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದರು. ಅದು ಅರಣ್ಯ ಪ್ರದೇಶವಾಗಿದ್ದು, ಅಲ್ಲಿಗೆ ಅರಣ್ಯ ಪ್ರದೇಶದ 3 ಕಿ.ಮೀ. ಕಾಲು ದಾರಿಯ ಮೂಲಕವೇ ಹೋಗಬೇಕು. ಈ ವೇಳೆ ದಾರಿ ಮಧ್ಯದಲ್ಲಿಯೇ ಕೆಲ ದುಷ್ಕರ್ಮಿಗಳು ಇದ್ದು, ರವೀಶ್ ಮತ್ತು ಆತನ ಪ್ರೇಯಸಿಯನ್ನು ಕೆಣಕಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಕ್ಸಮರ ಏರ್ಪಟ್ಟಿದ್ದು, ಜಗಳ ತಾರಕಕ್ಕೇರಿ ದುಷ್ಕರ್ಮಿಗಳು ತಮ್ಮ ಬಳಿ ಇದ್ದ ಲಾಂಗು ಹಾಗೂ ಮಚ್ಚು ಬಳಸಿ, ಯುವಕನ ಬಲಭಾಗದ ಮುಂಗೈ ಕತ್ತರಿಸಿದ್ದಾರೆ. ಅಲ್ಲದೆ ಇಷ್ಟಕ್ಕೇ ಸುಮ್ಮನಾಗದೇ ವಿಕೃತಿ ಮೆರೆದ ದುಷ್ಕರ್ಮಿಗಳು ಕತ್ತರಿಸಿದ ಕೈಯನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.
ಘಟನೆಯಿಂದಾಗಿ ರಕ್ತದ ಮಡುವಿನಲ್ಲಿ ಬಿದ್ದು, ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಪ್ರಿಯಕರನನ್ನು ಕಾಪಾಡಿ ಎಂದು ಯುವತಿ ಸ್ಥಳೀಯರಲ್ಲಿ ಕೇಳಿಕೊಂಡಿದ್ದಾಳೆ. ಬಳಿಕ ಸ್ಥಳೀಯರ ಸಹಾಯದಿಂದ ರವೀಶ್ ನನ್ನು ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅತಿಯಾದ ರಕ್ತಸ್ರಾವದಿಂದ ಬಳಲುತ್ತಿದ್ದ ರವೀಶ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಸದ್ಯ ರವೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇನ್ನು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬನ್ನೇರುಘಟ್ಟ ಪೊಲೀಸರು, ಯುವತಿಯಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಯುವತಿ ಗೊಂದಲಮಯ ಹೇಳಿಕೆ ನೀಡುತ್ತಿದ್ದು, ದಾಳಿ ಮಾಡಿದವರ ಬಗ್ಗೆ ಯಾವುದೇ ರೀತಿಯ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ. ಎಷ್ಟು ಜನ ದಾಳಿ ಮಾಡಿದ್ದಾರೆ ಎಂದು ಪೊಲೀಸರು ಕೇಳಿದ ಪ್ರಶ್ನೆಗೆ ಒಂದು ಬಾರಿ ಇಬ್ಬರು ಎಂದರೆ, ಮತ್ತೊಮ್ಮೆ ಮೂವರು ಎಂದು ಹೇಳುತ್ತಿದ್ದಾಳೆ. ಯಾವುದೇ ಮಾಹಿತಿ ಕೇಳಿದರೂ ಗೊಂದಲದ ಉತ್ತರ ನೀಡುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಘಟನೆ ನಡೆದ ಪ್ರದೇಶದ ಸ್ಥಳ ಪರಿಶೀಲನೆ ನಡೆಸಿರುವ ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago