ಹೊಸ ವರ್ಷ ಆಚರಣೆ ಹಿನ್ನೆಲೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಈಗ ವೀಡಿಯೋ ಕಾನ್ಫರೆನ್ಸ್ ಮೂಲಕ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ. 8 ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ಕ್ರಮಕೈಗೊಳ್ಳಲಾಗಿದೆ ಎಂದರು.
ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ. ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.
ವೈದ್ಯ ಇಲಾಖೆಯ ಜೊತೆ ಮಾತನಾಡಲಾಗಿದೆ. ಕೆಲವೊಂದು ಬೆಡ್ ಗಳನ್ನು ಮೀಸಲು ಮಾಡಲಾಗಿದೆ. ಅಂಬುಲೆನ್ಸ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಡ್ರಗ್ಸ್ ಬಗ್ಗೆಯೂ ಎಚ್ಚರಿಕೆಯನ್ನು ವಹಿಸಲಾಗಿದೆ. ಪರವಾನಿಗೆ ಇರುವ ಪಿಸ್ತೂಲ್, ರಿವಾಲ್ವರ್ ಗಳನ್ನು ಸಂಭ್ರಮಾಚರಣೆ ಸ್ಥಳಕ್ಕೆ ತರುವಂತಿಲ್ಲ ಎಂದು ಹೇಳಿದರು.
ಜನರಲ್ಲಿ ನಮ್ಮದೊಂದು ಮನವಿ ಮಾಡುತ್ತೇವೆ. ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.
ಸಾರ್ವಜನಿಕರು ಹೆಚ್ಚಾಗಿ ಪಬ್ಲಿಕ್ ವೆಹಿಕಲ್ ಬಳಸಿ. ಬಿಎಂಟಿಸಿ, ಮೆಟ್ರೋ ಎರಡು ಕೂಡ ಕಾರ್ಯ ನಿರ್ವಹಿಸುತ್ತವೆ. ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು. ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಂದೀಪ್ ಪಾಟೀಲ್, ಸಂಚಾರಿ ಮುಖ್ಯಸ್ಥ ಸಲೀಂ, ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…