Featured

ಬೆಂಗಳೂರು: ಹೊಸ ವರ್ಷ ಆಚರಣೆ : ಪೊಲೀಸ್ ನಿಯಮಗಳು ಜಾರಿಗೆ  – Vishwanews24

ಬೆಂಗಳೂರು: ಹೊಸ ವರ್ಷ ಆಚರಣೆ ರಾತ್ರಿ 1 ಗಂಟೆವರೆಗೆ ತನಕ ಮಾತ್ರ ಅವಕಾಶ :ಪೊಲೀಸ್ ನಿಯಮಗಳು ಜಾರಿಗೆ

ಬೆಂಗಳೂರು: ಈ ಬಾರಿಯ ಹೊಸ ವರ್ಷ ಆಚರಣೆಗೆ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೆಲವೊಂದು ಪೊಲೀಸ್ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಈ ರೂಲ್ಸ್ ಗಳನ್ನು ಅನುಸರಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಹೊಸ ವರ್ಷ ಆಚರಣೆ ಹಿನ್ನೆಲೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿರುವ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಈಗ ವೀಡಿಯೋ ಕಾನ್ಫರೆನ್ಸ್ ಮೂಲಕ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ. 8 ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮಹಿಳೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ಕ್ರಮಕೈಗೊಳ್ಳಲಾಗಿದೆ ಎಂದರು.

ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ. ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.

ವೈದ್ಯ ಇಲಾಖೆಯ ಜೊತೆ ಮಾತನಾಡಲಾಗಿದೆ. ಕೆಲವೊಂದು ಬೆಡ್ ಗಳನ್ನು ಮೀಸಲು ಮಾಡಲಾಗಿದೆ. ಅಂಬುಲೆನ್ಸ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಡ್ರಗ್ಸ್ ಬಗ್ಗೆಯೂ ಎಚ್ಚರಿಕೆಯನ್ನು ವಹಿಸಲಾಗಿದೆ. ಪರವಾನಿಗೆ ಇರುವ ಪಿಸ್ತೂಲ್, ರಿವಾಲ್ವರ್ ಗಳನ್ನು ಸಂಭ್ರಮಾಚರಣೆ ಸ್ಥಳಕ್ಕೆ ತರುವಂತಿಲ್ಲ ಎಂದು ಹೇಳಿದರು.

ಜನರಲ್ಲಿ ನಮ್ಮದೊಂದು ಮನವಿ ಮಾಡುತ್ತೇವೆ. ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.

ಸಾರ್ವಜನಿಕರು ಹೆಚ್ಚಾಗಿ ಪಬ್ಲಿಕ್ ವೆಹಿಕಲ್ ಬಳಸಿ. ಬಿಎಂಟಿಸಿ, ಮೆಟ್ರೋ ಎರಡು ಕೂಡ ಕಾರ್ಯ ನಿರ್ವಹಿಸುತ್ತವೆ. ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು. ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಸಂದೀಪ್ ಪಾಟೀಲ್, ಸಂಚಾರಿ ಮುಖ್ಯಸ್ಥ ಸಲೀಂ, ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 minutes ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago