Featured

ಬೆಂಗಳೂರು : 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ – Vishwanews24

ಬೆಂಗಳೂರು : 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ ವ್ಯಂಗ್ಯ – Vishwanews24

206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ..

ಗುರಿ ತಲುಪಲು ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ ..

ಬೆಂಗಳೂರು: “ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ದ ವಿಪಕ್ಷ ನಾಯ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

100 ಕೋಟಿ ಡೋಸ್​ಗಳ ಲಸಿಕೆ ನೀಡಿಕೆಯನ್ನು ಪೂರೈಸಿದ ದಿನದ ಬೆನ್ನಲ್ಲೇ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ವಿಚಾರವಾಗಿ ಟೀಕೆ ಮಾಡಿರುವ ವಿಪಕ್ಷ ನಾಯಕ , ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು “ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ.

“ದೇಶದಲ್ಲಿ ಇಲ್ಲಿಯ ವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ? ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ” ಎಂದು ಟೀಕಿಸಿದ್ದಾರೆ.

“ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ “ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

15 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

15 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

17 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

17 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

17 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

17 hours ago