ಬೆಂಗಳೂರು: ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣ ಹಿಂದೆ ಪೊಲೀಸ್ ಕಾನ್ಸ್ಟೇಬಲ್ ಇದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್ಮೈಂಡ್ ಎನ್ನಲಾಗುತ್ತಿದೆ. ಇವರೇ ಆರೋಪಿ ಗ್ಯಾಂಗ್ ನ್ನು ದರೋಡೆ ಹೇಗೆ ಮಾಡಬೇಕೆಂದು ಸಂಚು ರೂಪಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.
ಕಾನ್ಸ್ಟೇಬಲ್ ನಿಂದ ದರೋಡೆಗೆ ಪ್ಲಾನ್
ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಹೇಗೆ ಮಾಡಬೇಕೆಂದು ಹೇಳಿಕೊಟ್ಟಿದ್ದರು. ದರೋಡೆ ನಂತರ ಹೇಗೆ ತಪ್ಪಿಸಿಕೊಳ್ಳಬೇಕೆಂದು ಕೂಡ ತರಬೇತಿ ಕೊಟ್ಟಿದ್ದರು. ಪೊಲೀಸರು ಹೇಗೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದರು ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡವೇ 7.11 ಕೋಟಿ ರೂಪಾಯಿ ದರೋಡೆ ಮಾಡಿದೆ. ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿಗಳು ದರೋಡೆಯಲ್ಲಿ ಭಾಗಿಯಾಗಿದ್ದು, ಕದ್ದ ಹಣವನ್ನು ಬೆಂಗಳೂರಲ್ಲಿಯೇ ಬಚ್ಚಿಟ್ಟು ಪರಾರಿಯಾಗಿದ್ದಾರೆ ಎಂಬ ವಿಷಯ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.
ದರೋಡೆ ಪ್ರಕರಣದಲ್ಲಿ ಆರೋಪಿಗಳನ್ನು 24 ಗಂಟೆಯೊಳಗೆ ಪತ್ತೆಹಚ್ಚಬೇಕೆಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿದ್ದರು. ಈವರೆಗೆ ದರೋಡೆಕೋರರ ಸುಳಿವು ಸಿಕ್ಕಿ ಆರೋಪಿಗಳ ಫೋಟೋ ಬಿಡುಗಡೆ ಮಾಡಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…