Featured

ಬೆಂಗಳೂರು : 7 ಮಕ್ಕಳ ನಾಪತ್ತೆ ಪ್ರಕರಣ : ಮೂವರು ಮಕ್ಕಳು ಪತ್ತೆ – Vishwanews24

ಬೆಂಗಳೂರು : 7 ಮಕ್ಕಳ ನಾಪತ್ತೆ ಪ್ರಕರಣ : ಮೂವರು ಮಕ್ಕಳು ಪತ್ತೆ – Vishwanews24

ಪೊಲೀಸರಿಗೆ ಸುಳಿವು ಕೊಟ್ಟ ಚಿಂದಿ ಆಯುವ ವ್ಯಕ್ತಿ..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 7 ಮಂದಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಪತ್ತೆಯಾಗಿದ್ದಾರೆ.

ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂವರು ಮಕ್ಕಳು ಇಂದು ಪತ್ತೆಯಾಗಿದ್ದಾರೆ. ಪರಿಕ್ಷಿತ್, ಕಿರಣ್ ಹಾಗೂ ನಂದನ್ ಪತ್ತೆಯಾದ ಮಕ್ಕಳು.

ಈ ಮೂವರು ಮಕ್ಕಳು ಕಬ್ಬಡ್ಡಿಯಲ್ಲಿ ಸಾಧನೆ ಮಾಡೋದಾಗಿ ಪತ್ರ ಬರೆದಿಟ್ಟು ಮನೆ ತೊರೆದಿದ್ದರು. ಇದೀಗ ಚಿಂದಿ ಆಯುವ ವ್ಯಕ್ತಿಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ಹುಡುಕಾಡಿ ಪೊಲೀಸರು ಮಕ್ಕಳನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಗ್ಗೆ 7.30 ರ ಸಮಯದಲ್ಲಿ ಈ ಮೂವರು ಆನಂದ್ ರಾವ್ ಸರ್ಕಲ್ ಬಳಿ ಕಾಣಿಸಿಕೊಂಡಿದ್ದರು. ಕೂಡಲೇ ಬಾಗಲಗುಂಟೆ ಪೊಲೀದರಿಗೆ ಮಾಹಿತಿ ರವಾನೆ ಮಾಡಲಾಗಿತ್ತು. ಸದ್ಯ ಮಕ್ಕಳು ಉಪ್ಪಾರಪೇಟೆ ಪೊಲೀಸರ ರಕ್ಷಣೆಯಲ್ಲಿದ್ದು, ಬಾಗಲಗುಂಟೆ ಪೊಲೀಸರು ಬಂದ ತಕ್ಷಣ ಮಕ್ಕಳನ್ನ ಒಪ್ಪಿಸಲಿದ್ದಾರೆ.

ಶನಿವಾರ ಮನೆ ಬಿಟ್ಟ ನಂತರ ಮಕ್ಕಳು ಕೆಂಗೇರಿಗೆ ಬಂದಿದ್ದಾರೆ. ಕೆಂಗೇರಿಯಿಂದ ಮೈಸೂರಿಗೆ ಹೋಗಿದ್ದಾರೆ. ಮೈಸೂರಿನಲ್ಲಿ ಒಂದು ದಿನ ಕಳೆದಿರುವ ಮಕ್ಕಳು, ಮೈಸೂರು ದಸರಾದಲ್ಲಿ ನಡೆಯುತ್ತಿದ್ದ ದೇಶೀಯ ಕ್ರೀಡೆಗಳನ್ನು ನೋಡಿದ್ದಾರೆ. ನಿನ್ನೆ ರಾತ್ರಿ ಮೈಸೂರಿಂದ ಮಕ್ಕಳು ಬೆಂಗಳೂರಿಗೆ ಬಂದಿದ್ದಾರೆ. ಮೆಜೆಸ್ಟಿಕ್ ನಿಂದ ಕಂಠೀರವ ಸ್ಟೇಡಿಯಂ ವರೆಗೆ ಜಾಗಿಂಗ್ ಹೋಗಿದ್ದ ಮಕ್ಕಳು, ಕಂಠೀರವ ಸ್ಟೇಡಿಯಂ ಬಳಿ ಪ್ರಾಕ್ಟೀಸ್ ಗೇಮ್ ಗಳನ್ನ ನೋಡ್ಕೊಂಡು ಆನಂದರಾವ್ ಸರ್ಕಲ್ ಕಡೆ ವಾಪಸ್ಸಾಗಿದ್ದರು. ಈ ವೇಳೆ ಮಕ್ಕಳು ಚಿಂದಿ ಆಯುವ ವ್ಯಕ್ತಿ ಮುಖಾಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಚಿಕ್ಕಮಗಳೂರು : ತನ್ನ ತೀಕ್ಷ್ಣ ನೆನಪಿನ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಮೂರು ವರ್ಷದ ಆರ್ವಿ -Vishwanews24

ಶುಕ್ರವಾರ ಶಾಲೆಯಲ್ಲಿಯೇ ಮನೆ ಬಿಡೋ ನಿರ್ಧಾರ ಮಾಡಿದ್ದ ಮಕ್ಕಳು, ಅದರಂತೆ ಶನಿವಾರ ಬೆಳಗ್ಗೆ 5.30 ಕ್ಕೆ ಮನೆಯಿಂದ ಹೊರಟಿದ್ದಾರೆ. ಜಾಗಿಂಗ್ ಹೋಗಿ ಬರೋದಾಗಿ ಬಂದಿದ್ದ ಮೂವರು ಮಕ್ಕಳು, ಮನೆಯಿಂದ ಬರುತ್ತಾ ಮೂವರು ತಲಾ ಒಂದೊಂದು ಸಾವಿರ ತಂದಿದ್ದಾರೆ. ಮೊದಲು ಮಂಗಳೂರಿಗೆ ಹೋಗೋಣ ಎಂದು ಪ್ಲಾನ್ ಮಾಡಿಕೊಂಡಿದ್ದಾರೆ. ನಂತರ ಪ್ಲಾನ್ ಬದಲಾಯಿಸಿ ಮೈಸೂರು ಬಸ್ ಹತ್ತಿದ್ದಾರೆ. ಮೈಸೂರು ಬಸ್ ಸ್ಟಾಪ್‍ನಲ್ಲಿ ಶನಿವಾರ ಇಡೀ ದಿನ ಉಳಿದುಕೊಂಡಿದ್ದಾರೆ. ಮೈಸೂರಿಗೆ ತೆರಳಿ ದಸರಾ ಹಬ್ಬ ನೋಡಿಕೊಂಡು ಬಂದಿದ್ದಾರೆ. ಭಾನುವಾರ ಕೂಡ ಮೈಸೂರಿನಲ್ಲಿ ಕಾಲ ಕಳೆದಿದ್ದಾರೆ. ಮತ್ತೆ ಭಾನುವಾರ ರಾತ್ರಿ ಮೈಸೂರಿನಿಂದ ಟ್ರೈನ್ ಹತ್ತಿದ್ದಾರೆ. ಬೆಳಗ್ಗೆ ಆನಂದ್ ರಾವ್ ಸರ್ಕಲ್ ಬಳಿ ಬಂದಿದ್ದು, ಪೇಪರ್ ಆಯುವ ವ್ಯಕ್ತಿ ಬಳಿ ಕೆಲಸ ಕೇಳಿದ್ದಾರೆ. ಮಕ್ಕಳ ನಾಪತ್ತೆ ಪ್ರಕರಣ ವಿಚಾರ ತಿಳಿದಿದ್ದ ಪೇಪರ್ ಆಯುವ ವ್ಯಕ್ತಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಮಕ್ಕಳ ರಕ್ಷಣೆ ಮಾಡಿದ್ದಾರೆ.

 

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

49 minutes ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

1 hour ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

3 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

3 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago