Featured

ಬೆಟ್ಟ ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ – Vishwanews24

ಬೆಟ್ಟ ಕುರುಬ ಸಮುದಾಯ ಎಸ್ ಟಿ ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಪ್ರಧಾನಿ‌ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ವಿಚಾರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕದ ಬೆಟ್ಟ ಕುರುಬ ಜನಾಂಗಕ್ಕೆ ಸೇರಿದ 12 ಜಾತಿಗಳನ್ನ ಎಸ್.ಟಿ ಸಮುದಾಯದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.

ಕರ್ನಾಟಕ ಸರ್ಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು.

ಕರ್ನಾಟಕದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಾಗೂ ಸುತ್ತಮುತ್ತಲಿನ ಬೆಟ್ಟಗಳಲ್ಲಿ ಬೆಟ್ಟ ಕುರುಬರು ವಾಸಿಸುತ್ತಿದ್ದರು. ಇವರನ್ನ ಕಾಡು ಕುರುಬರು ಎಂದು ಕರೆಯಲಾಗುತ್ತಿತ್ತು. ನಂತರದಲ್ಲಿ ಬೆಟ್ಟ ಕುರುಬರು ಎಂದು ಕರೆಯಲಾಗುತ್ತಿತ್ತು. ಇದೀಗ ಈ ಸಮುದಾಯಕ್ಕೆ ಸೇರಿದ 12 ಉಪ ಜಾತಿಗಳನ್ನು ಎಸ್.ಟಿ ಸಮುದಾಯಕ್ಕೆ ಸೇರಿಸಲು‌ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಕುರಿತು ರಾಜ್ಯ ಬಿಜೆಪಿ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಸ್ಥೆಯ ಮೇರೆಗೆ ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಕೇಂದ್ರ ಸಚಿವ ಒಪ್ಪಿಗೆ ಸೂಚಿಸಿರುವುದಾಗಿ ತಿಳಿಸಲಾಗಿದೆ.

ಇದರಿಂದಾಗಿ ಈ ವರ್ಗದವರು ಸರ್ಕಾರದ ಹೆಚ್ಚುವರಿ ಸೌಲಭ್ಯಗಳನ್ನು ಪಡೆದು ಸಮಾಜ ಮುಖಿಯಾಗಲು ಸಹಕಾರಿಯಾಗಲಿದೆ ಎಂದು ಹೇಳಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

2 days ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

2 days ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

2 days ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

2 days ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

2 days ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

2 days ago