Featured

ಬೆಲೆ ಏರಿಕೆ ಬಿಜೆಪಿಗೆ ದುಬಾರಿಯಾಗಲಿದೆ ಜಾಗೃತೆ ಎಂದ ಬಾಬಾ ರಾಮದೇವ್

ನವದೆಹಲಿ : ಕೇಂದ್ರ ಸರ್ಕಾರವು ಬೆಲೆ ಏರಿಕೆಯನ್ನು ತಕ್ಷಣವೇ ನಿಯಂತ್ರಿಸದಿದ್ದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದು ಬಿಜೆಪಿಗೆ ದುಬಾರಿಯಾಗಲಿದೆ ಎಂದು ಯೋಗ ಗುರು ರಾಮದೇವ್‌ ಅಭಿಪ್ರಾಯಪಟ್ಟಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. 2014ರ ಚುನಾವಣೆಯಲ್ಲಿ ಅವರು ಬಿಜೆಪಿ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿದ್ದರು.

‘ಮೋದಿ ಅವರ ನೀತಿಗಳನ್ನು ಹಲವರು ಹೊಗಳುತ್ತಿದ್ದಾರೆ. ಆದರೆ ಅವುಗಳಲ್ಲಿ ಕೆಲವನ್ನು ಸರಿಪಡಿಸುವ ಅಗತ್ಯ ಇದೆ’ ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಸೇರಿ ವಿವಿಧ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ತಾವು ಎಡಪಂಥೀಯನೂ ಅಲ್ಲ, ಬಲಪಂಥೀಯನೂ ಅಲ್ಲ, ಮಧ್ಯಪಂಥೀಯ. ಕೆಲವು ಮಹತ್ವದ ವಿಚಾರಗಳಲ್ಲಿ ‘ಮೌನ ಯೋಗ’ ಅನುಸರಿಸುತ್ತಿರುವುದರಿಂದ ಪ್ರಶ್ನೆ ಕೇಳಿ ತಮ್ಮನ್ನು ಇಕ್ಕಟ್ಟಿಗೆ ಸಿಲುಕಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

‘ನಾನು ರಾಜಕೀಯದಿಂದ ಹಿಂದೆ ಸರಿದಿದ್ದೇನೆ. ಎಲ್ಲ ಪಕ್ಷಗಳ ಜತೆಗೂ ಇದ್ದೇನೆ. ಹಾಗಿದ್ದರೂ ನಾನು ಸ್ವತಂತ್ರ’ ಎಂದು ಅವರು ಹೇಳಿಕೊಂಡಿದ್ದಾರೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು. ‍ಪೆಟ್ರೋಲ್‌ ಮತ್ತು ಡೀಸೆಲ್‌ಗೆ ಹಣ ಕೊಟ್ಟು ಜನರ ಜೇಬು ಖಾಲಿಯಾಗಿದೆ. ಹಾಗಾಗಿ ಅದನ್ನು ಜಿಎಸ್‌ಟಿಯ ಅತ್ಯಂತ ಕಡಿಮೆ ತೆರಿಗೆಯ ಹಂತಕ್ಕೆ ಸೇರಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಜಾಹಿರಾತು: ಪಂಡೀತ್ ಸುದರ್ಶನ್ ಭಟ್

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago