ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ವಿಷಪೂರಿತ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.
ಉಮರಾಣಿ ಗ್ರಾಮದ ಜಿದ್ದಿಮನಿ ಹಾಗೂ ಕೋಳಿ ಕುಟುಂಬದ ಸದಸ್ಯರು ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ, ಅಲ್ಲಿ ಬೆಳೆದಿದ್ದ ಅಣಬೆಗಳನ್ನು ಕಿತ್ತು ತಂದಿದ್ದರು. ಅಣಬೆ ಕಂಡ ಖುಷಿಯಲ್ಲಿ ಮನೆಯಲ್ಲಿ ಅಡುಗೆ ಮಾಡಿ ಎಲ್ಲರೂ ಸವಿದಿದ್ದರು. ಆದರೆ, ಊಟ ಮಾಡಿದ ಕೆಲವೇ ಹೊತ್ತಿನಲ್ಲಿ ಎಲ್ಲರಿಗೂ ವಾಂತಿ ಹಾಗೂ ಭೇದಿ ಕಾಣಿಸಿಕೊಂಡು ಮನೆಯಲ್ಲೇ ನರಳಾಡತೊಡಗಿದ್ದಾರೆ.
ವರದಿಗಳ ಪ್ರಕಾರ, ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರು ಕ್ರಿಮಿನಾಶಕ ಔಷಧಿಯನ್ನು ಸಿಡಿಸಿದ್ದರು. ಔಷಧಿ ಹೊಡೆದ ವಿಷಯ ತಿಳಿಯದ ಕುಟುಂಬದ ಸದಸ್ಯರು ಆ ಅಣಬೆಯನ್ನು ಕಿತ್ತು ತಂದು ಸೇವಿಸಿದ್ದಾರೆ. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿದ ಪರಿಣಾಮ ಅದು ವಿಷವಾಗಿ ಮಾರ್ಪಟ್ಟು ಇಡೀ ಕುಟುಂಬ ಅಸ್ವಸ್ಥಗೊಳ್ಳಲು ಕಾರಣವಾಗಿದೆ.
ತೀವ್ರ ಅಸ್ವಸ್ಥಗೊಂಡ 9 ಜನರನ್ನು ತಕ್ಷಣವೇ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರಲ್ಲಿ ಒಬ್ಬರು ಗರ್ಭಿಣಿ ಮಹಿಳೆಯಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಇರಲಿ ಎಚ್ಚರ
ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಜಾಗ್ರತೆ ಇರಲಿ
ಹೊಲಗಳಲ್ಲಿ ಬೆಳೆಯುವ ಅಣಬೆಗಳ ಮೇಲೆ ಕ್ರಿಮಿನಾಶಕಗಳು ಬಿದ್ದಿರುವ ಸಾಧ್ಯತೆ ಹೆಚ್ಚಿರುತ್ತದೆ
ಕೆಲವು ಜಾತಿಯ ಅಣಬೆಗಳು ನೈಸರ್ಗಿಕವಾಗಿಯೇ ವಿಷಕಾರಿಯಾಗಿರುತ್ತವೆ. ಅವುಗಳನ್ನು ಗುರುತಿಸುವುದು ಕಷ್ಟ
ಅಣಬೆ ತರುವ ಮುನ್ನ ಅವು ಬೆಳೆದ ಜಾಗ ಮತ್ತು ಅವುಗಳ ವಿಧದ ಬಗ್ಗೆ ಖಚಿತ ಮಾಹಿತಿ ಇರಲಿ
ಅಪರಿಚಿತ ಅಣಬೆಗಳನ್ನು ತಿಂದು ಜೀವಕ್ಕೆ ಸಂಚಕಾರ ತಂದುಕೊಳ್ಳಬೇಡಿ
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]