Featured

ಬೆಳಗಾವಿ: ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ – vishwanews24

ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ..

ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ ಕುಟುಂಬ ಅಸ್ವಸ್ಥ..

ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಇರಲಿ ಎಚ್ಚರ..

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ವಿಷಪೂರಿತ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.

ಉಮರಾಣಿ ಗ್ರಾಮದ ಜಿದ್ದಿಮನಿ ಹಾಗೂ ಕೋಳಿ ಕುಟುಂಬದ ಸದಸ್ಯರು ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ, ಅಲ್ಲಿ ಬೆಳೆದಿದ್ದ ಅಣಬೆಗಳನ್ನು ಕಿತ್ತು ತಂದಿದ್ದರು. ಅಣಬೆ ಕಂಡ ಖುಷಿಯಲ್ಲಿ ಮನೆಯಲ್ಲಿ ಅಡುಗೆ ಮಾಡಿ ಎಲ್ಲರೂ ಸವಿದಿದ್ದರು. ಆದರೆ, ಊಟ ಮಾಡಿದ ಕೆಲವೇ ಹೊತ್ತಿನಲ್ಲಿ ಎಲ್ಲರಿಗೂ ವಾಂತಿ ಹಾಗೂ ಭೇದಿ ಕಾಣಿಸಿಕೊಂಡು ಮನೆಯಲ್ಲೇ ನರಳಾಡತೊಡಗಿದ್ದಾರೆ.

ವರದಿಗಳ ಪ್ರಕಾರ, ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರು ಕ್ರಿಮಿನಾಶಕ ಔಷಧಿಯನ್ನು ಸಿಡಿಸಿದ್ದರು. ಔಷಧಿ ಹೊಡೆದ ವಿಷಯ ತಿಳಿಯದ ಕುಟುಂಬದ ಸದಸ್ಯರು ಆ ಅಣಬೆಯನ್ನು ಕಿತ್ತು ತಂದು ಸೇವಿಸಿದ್ದಾರೆ. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿದ ಪರಿಣಾಮ ಅದು ವಿಷವಾಗಿ ಮಾರ್ಪಟ್ಟು ಇಡೀ ಕುಟುಂಬ ಅಸ್ವಸ್ಥಗೊಳ್ಳಲು ಕಾರಣವಾಗಿದೆ.

ತೀವ್ರ ಅಸ್ವಸ್ಥಗೊಂಡ 9 ಜನರನ್ನು ತಕ್ಷಣವೇ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರಲ್ಲಿ ಒಬ್ಬರು ಗರ್ಭಿಣಿ ಮಹಿಳೆಯಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇರಲಿ ಎಚ್ಚರ
ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಜಾಗ್ರತೆ ಇರಲಿ
ಹೊಲಗಳಲ್ಲಿ ಬೆಳೆಯುವ ಅಣಬೆಗಳ ಮೇಲೆ ಕ್ರಿಮಿನಾಶಕಗಳು ಬಿದ್ದಿರುವ ಸಾಧ್ಯತೆ ಹೆಚ್ಚಿರುತ್ತದೆ
ಕೆಲವು ಜಾತಿಯ ಅಣಬೆಗಳು ನೈಸರ್ಗಿಕವಾಗಿಯೇ ವಿಷಕಾರಿಯಾಗಿರುತ್ತವೆ. ಅವುಗಳನ್ನು ಗುರುತಿಸುವುದು ಕಷ್ಟ
ಅಣಬೆ ತರುವ ಮುನ್ನ ಅವು ಬೆಳೆದ ಜಾಗ ಮತ್ತು ಅವುಗಳ ವಿಧದ ಬಗ್ಗೆ ಖಚಿತ ಮಾಹಿತಿ ಇರಲಿ
ಅಪರಿಚಿತ ಅಣಬೆಗಳನ್ನು ತಿಂದು ಜೀವಕ್ಕೆ ಸಂಚಕಾರ ತಂದುಕೊಳ್ಳಬೇಡಿ

Vishwa News 24

Recent Posts

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

2 minutes ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

17 minutes ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

35 minutes ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

1 hour ago

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ – vishwanews24

ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…

1 hour ago

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ – vishwanews24

ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…

2 hours ago