ಬೆಳಗಾವಿ: ನಗರದ ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ರವಿವಾರ ಮಧ್ಯಾಹ್ನ ಸಿಲಿಂಡರ್ ಗ್ಯಾಸ್ ಸ್ಪೋಟಗೊಂಡ ಪ್ರಕರಣದಲ್ಲಿ ಗಾಯಗೊಂಡವರ ಪೈಕಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದೆಂದು ತಿಳಿದುಬಂದಿದೆ.
ಉಡುಪಿ ಮೂಲದ ಕಾಮಾಕ್ಷಿ ಭಟ್ ಹಾಗೂ ಹೇಮಂತ್ ಭಟ್ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಗೊಂಡ ಮತ್ತೊಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಸವನಗಲ್ಲಿಯ ಅಪಾರ್ಟ್ ಮೆಂಟ್ ನಲ್ಲಿ ಈ ಕುಟುಂಬ ವಾಸಿಸುತ್ತಿತ್ತು. ರವಿವಾರ ಮಧ್ಯಾಹ್ನ ಸಿಲಿಂಡರ್ ಗ್ಯಾಸ್ ಸೋರಿಕೆಯಾಗಿ ಸ್ಪೋಟಗೊಂಡಿದೆ. ಸ್ಪೋಟದಿಂದ ಒಂದೇ ಕುಟುಂಬದ ಐವರು ಗಾಯಗೊಂಡಿದ್ದರು. ಸ್ಥಳೀಯರು ಹಾಗೂ ಪೊಲೀಸರು ಸೇರಿ ಈ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ಮಧ್ಯರಾತ್ರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…