Featured

ಬೆಳಗಾವಿ: ಕಾಂಗ್ರೆಸ್‌ ಸೇರ್ಪಡೆಯಾದ ಜೆಡಿಎಸ್‌ ನಾಯಕ ಕೋನರೆಡ್ಡಿ – Vishwanews24

ಬೆಳಗಾವಿ: ಕಾಂಗ್ರೆಸ್‌ ಸೇರ್ಪಡೆಯಾದ ಜೆಡಿಎಸ್‌ ನಾಯಕ ಕೋನರೆಡ್ಡಿ – Vishwanews24

ಬೆಳಗಾವಿ: ಧಾರವಾಡ ಜಿಲ್ಲೆಯ ಜಾತ್ಯತಿತ ಜನತಾ ದಳದ(ಜೆಡಿಎಸ್​) ಪ್ರಮುಖ ನಾಯಕರಾಗಿದ್ದ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್​.ಎಚ್​. ಕೋನರೆಡ್ಡಿ ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರಿದ್ದಾರೆ.

ಬೆಳಗಾವಿಯ ಕಾಂಗ್ರೆಸ್​ ಭವನದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೋನರೆಡ್ಡಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾದರು.

ಜೆಡಿಎಸ್​ಗೆ ಈ ಭಾಗದಲ್ಲಿ ನೆಲೆ ಕುಸಿಯುತ್ತಿರುವುದರಿಂದ ಪಕ್ಷ ಬದಲಿಸುವ ಬಗ್ಗೆ ಕೆಲ ತಿಂಗಳ ಹಿಂದೆಯೇ ಕೋನರಡ್ಡಿ ಸುಳಿವು ನೀಡಿದ್ದರು. ಜೆಡಿಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಕೋನರೆಡ್ಡಿ, ನನ್ನ ಕ್ಷೇತ್ರದ ಮತದಾರರ ಒತ್ತಾಯದ ಮೇರೆಗೆ ಕಾಂಗ್ರೆಸ್ ಸೇರಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೂ ಕಾಲಾವಕಾಶ ಇದೆ. ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬಿಡೋದು ಹಿರಿಯರಿಗೆ ಬಿಟ್ಟಿದ್ದು. ನನಗೆ ಜೆಡಿಎಸ್ ಸಾಕಷ್ಟು ಒಳ್ಳೆಯ ಸ್ಥಾನ ಮಾನ ನೀಡಿತ್ತು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಕಾರ್ಯದರ್ಶಿಯನ್ನಾಗಿ ಮಾಡಿಕೊಂಡಿದ್ರು. ನನಗೆ ಜೆಡಿಎಸ್​ನಿಂದ ಬೇಸರ ಆಗಿಲ್ಲ. ಕಾಂಗ್ರೆಸ್ ಪಕ್ಷದಿಂದ ನನಗೆ ಯಾವುದೇ ಆಮಿಷ ಇಲ್ಲ. ಈಗತಾನೆ ಕಾಂಗ್ರೆಸ್ ಸೇರಿದ್ದೇನೆ, ಮುಂದೆ ನೋಡೋಣ. ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ನಂಬಿಕೆ ಇದೆ ಎಂದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago