ಬೆಳಗಾವಿ: ಧಾರವಾಡ ಜಿಲ್ಲೆಯ ಜಾತ್ಯತಿತ ಜನತಾ ದಳದ(ಜೆಡಿಎಸ್) ಪ್ರಮುಖ ನಾಯಕರಾಗಿದ್ದ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೋನರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ಗೆ ಈ ಭಾಗದಲ್ಲಿ ನೆಲೆ ಕುಸಿಯುತ್ತಿರುವುದರಿಂದ ಪಕ್ಷ ಬದಲಿಸುವ ಬಗ್ಗೆ ಕೆಲ ತಿಂಗಳ ಹಿಂದೆಯೇ ಕೋನರಡ್ಡಿ ಸುಳಿವು ನೀಡಿದ್ದರು. ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದರು.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಕೋನರೆಡ್ಡಿ, ನನ್ನ ಕ್ಷೇತ್ರದ ಮತದಾರರ ಒತ್ತಾಯದ ಮೇರೆಗೆ ಕಾಂಗ್ರೆಸ್ ಸೇರಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೂ ಕಾಲಾವಕಾಶ ಇದೆ. ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬಿಡೋದು ಹಿರಿಯರಿಗೆ ಬಿಟ್ಟಿದ್ದು. ನನಗೆ ಜೆಡಿಎಸ್ ಸಾಕಷ್ಟು ಒಳ್ಳೆಯ ಸ್ಥಾನ ಮಾನ ನೀಡಿತ್ತು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಕಾರ್ಯದರ್ಶಿಯನ್ನಾಗಿ ಮಾಡಿಕೊಂಡಿದ್ರು. ನನಗೆ ಜೆಡಿಎಸ್ನಿಂದ ಬೇಸರ ಆಗಿಲ್ಲ. ಕಾಂಗ್ರೆಸ್ ಪಕ್ಷದಿಂದ ನನಗೆ ಯಾವುದೇ ಆಮಿಷ ಇಲ್ಲ. ಈಗತಾನೆ ಕಾಂಗ್ರೆಸ್ ಸೇರಿದ್ದೇನೆ, ಮುಂದೆ ನೋಡೋಣ. ಸಿದ್ದರಾಮಯ್ಯ ಹಾಗೂ ಡಿಕೆಶಿ ಮೇಲೆ ನಂಬಿಕೆ ಇದೆ ಎಂದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…