Featured

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ

ಜು.6 ಕ್ಕೆ ಬೆಳಗಾವಿಗೆ ಮೋಹನ್ ಭಾಗವತ್ ಆಗಮನ

ಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಮುಖ ಸಭೆಯ ಬೆನ್ನಲ್ಲೇ, ಈ ಬಾರಿಯ ಪ್ರತಿಷ್ಠಿತ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಕುಂದಾನಗರಿ ಬೆಳಗಾವಿ ವೇದಿಕೆಯಾಗಲಿದೆ.

ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ವಾರ್ಷಿಕ ಸಭೆಯಲ್ಲಿ ಸಂಘದ ವಿವಿಧ ಸ್ತರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: 

ದೇಶವ್ಯಾಪಿಯ ಎಲ್ಲಾ ಪ್ರಾಂತ ಪ್ರಚಾರಕರು ಮತ್ತು ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು, ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳ ಪ್ರಮುಖ ಪ್ರಚಾರಕರು ಸೇರಿದಂತೆ ಒಟ್ಟು 46 ಪ್ರಾಂತಗಳ ಪ್ರಮುಖ ಕಾರ್ಯಕರ್ತರು., ಸಂಘ ಪ್ರೇರಿತ 32 ವಿವಿಧ ಸಂಘಟನೆಗಳ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಹಿನ್ನೆಲೆಯಲ್ಲಿ ಈ ಸಭೆ ಅತ್ಯಂತ ಪ್ರಾಮುಖ್ಯತೆ ಪಡೆದುಕೊಂಡಿದೆ. ಸಂಘದ ಶಾಖೆಗಳ ವಿಸ್ತರಣೆ ಮತ್ತು ಮುಂಬರುವ ದಿನಗಳ ದೇಶವ್ಯಾಪಿ ಕಾರ್ಯಯೋಜನೆಗಳ ಕುರಿತು ಈ ಸಭೆಯಲ್ಲಿ ಗಂಭೀರ ಹಾಗೂ ಮಹತ್ವದ ಚರ್ಚೆಗಳು ನಡೆಯಲಿವೆ.

ಇದನ್ನೂ ಓದಿ: 

ಸಭೆಯ ನೇತೃತ್ವ ವಹಿಸಲು ಆರ್‌ಎಸ್‌ಎಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಜುಲೈ 6 ರಂದೇ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಇವರೊಂದಿಗೆ ಸಂಘದ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಲವು ಪ್ರಮುಖ ರಾಷ್ಟ್ರೀಯ ನಾಯಕರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಸರಸಂಘಚಾಲಕರ ಮುಂಚಿತ ಆಗಮನ ಹಾಗೂ ರಾಷ್ಟ್ರೀಯ ನಾಯಕರ ಉಪಸ್ಥಿತಿಯ ಹಿನ್ನೆಲೆಯಲ್ಲಿ, ಬೆಳಗಾವಿ ನಗರದಾದ್ಯಂತ ಯಾವುದೇ ಲೋಪದೋಷಗಳಾಗದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಅತ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

13 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

16 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

16 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

17 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

17 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

17 hours ago