ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಸಂಭವಿಸಿದ ಬಾಣಂತಿಯರು, ಮಕ್ಕಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್ ಗೂ ಸಂಬಂಧ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಅವರು, ಪ್ರಕರಣ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಎಲ್ಲವನ್ನೂ ಕೂಡ ಚರ್ಚೆ ಮಾಡಿದ್ದೇನೆ. ಯಾವ ಕಾರಣಕ್ಕೆ ಸಾವಿನ ಪ್ರಕರಣಗಳು ಸಂಭವಿಸಿವೆ, ಸಾವು ತಡೆಯಲು ಯಾವ ಕ್ರಮ ಕೈಗೊಳ್ಳಬೇಕು. ಏನೆಲ್ಲಾ ಮಾಡಬೇಕು ಅದನ್ನು ಮಾಡುತ್ತಿದ್ದೇವೆ ಹೇಳಿದರು.
ನಮ್ಮ ಜಿಲ್ಲೆಯಲ್ಲಿ 54 ಲಕ್ಷ ಜನಸಂಖ್ಯೆಯಿದೆ. ಹೀಗಾಗಿ ಅಂಕಿ ಅಂಶ ಹೆಚ್ಚಾಗಿ ಕಾಣುತ್ತಿದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಿಂದ ಆಸ್ಪತ್ರೆಗೆ ಬೆಳಗಾವಿಗೆ ಬರುತ್ತಾರೆ. ಬಾಣಂತಿಯರು, ಹಸುಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ. ಕಬ್ಬಿನಾಂಶ ಕೊರತೆ, ಪ್ರೀ ಮೆಚ್ಯುರ್ ಬೇಬಿ ಹೀಗೆ ಅನೇಕ ಕಾರಣಗಳಿವೆ. 1ಲಕ್ಷ ಮಕ್ಕಳು ಹುಟ್ಟಿದರೆ 28 ಮಕ್ಕಳು ಅದರಲ್ಲಿ ತೀರಿಕೊಳ್ಳುತ್ತಿದ್ದಾರೆ. ಇಡೀ ದೇಶಕ್ಕೆ 6ನೇ ಅತ್ಯುತ್ತಮ ಆಸ್ಪತ್ರೆ ಎಂದು ಬಿಮ್ಸ್ ಪಾತ್ರವಾಗಿದೆ. ಬಾಣಂತಿಯರು, ಹಸುಗೂಸುಗಳ ಸಾವಿಗೆ ಇಂಥದ್ದೇ ಕಾರಣ ಎಂದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ ಎಂದರು.
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…
ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…
ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…
ಉಡುಪಿ: ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…
ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…