Featured

ಬೆಳಗಾವಿ ಮನೆ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ – Vishwanews24

ಬೆಳಗಾವಿ ಮನೆ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ – Vishwanews24

ಬೆಳಗಾವಿ : ಕರ್ನಾಟಕ ರಾಜ್ಯದ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮಳೆಗೆ ಹಳೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಆರು ಮಂದಿ ಮತ್ತು ಪಕ್ಕದ ಮನೆಯ ಬಾಲಕಿ ಸೇರಿ ಏಳು ಮಂದಿ ಮೃತಪಟ್ಟ ಘಟನೆ ನಿನ್ನೆ ನಡೆದಿತ್ತು. ಘಟನೆ ಸಂಬಂಧಿಸಿದಂತೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು 2ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಸತತ ಮೂರು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಹಳೆ ಗೋಡೆ ಒದ್ದೆ ಆಗಿತ್ತು. ಆ ಗೋಡೆ ಬೀಳುವುದನ್ನು ನೋಡಲು ಹೋಗಿದ್ದಾಗ ಈ ದುರಂತ ಸಂಭವಿಸಿತ್ತು. ಸುರೇಶ್ ಖಾನಗಾವಿ ಕುಟುಂಬದ ಲಕ್ಷ್ಮಿ ಅರ್ಜುನ್ ಖಾನಗಾವಿ(15), ಶಾಂತವ್ವ ಭೀಮಪ್ಪ ಖಾನಗಾವಿ(50), ಅರ್ಜುನ್ ಹನಮಂತ ಖಾನಗಾವಿ, ಸತ್ಯವ್ವ ಅರ್ಜುನ್ ಖಾನಗಾವಿ(45), ಪೂಜಾ ಅರ್ಜುನ್ ಖಾನಗಾವಿ(8), ಸವಿತಾ ಭೀಮಪ್ಪ ಖಾನಗಾವಿ(28) ಮತ್ತು ಪಕ್ಕದ ಮನೆಯ ಬಾಲಕಿ ಕಾಶವ್ವ ವಿಠ್ಠಲ ಕೊಳೆಪ್ಪನವರ(8) ಸಾವನ್ನಪ್ಪಿದ್ದರು. ಈ ಘಟನೆ ಬಗ್ಗೆ ಟ್ವಿಟ್ಟರ್‍ ನಲ್ಲಿ ಸಂತಾಪ ಸೂಚಿಸಿ 2 ಲಕ್ಷ ರೂ. ಪರಿಹಾರವನ್ನು ಮೋದಿ ಘೋಷಿಸಿದ್ದಾರೆ.

ಸುರೇಶ್ ಖಾನಗಾವಿ ಕುಟುಂಬ ತಮ್ಮ ಹಳೆಯ ಮನೆಯನ್ನು ಬೀಳಿಸಿ ಹೊಸ ಮನೆ ಕಟ್ಟುವ ಸಿದ್ಧತೆಯಲ್ಲಿದ್ದರು. ಅದಕ್ಕಾಗಿಯೇ ಪಕ್ಕದಲ್ಲಿ ಶೆಡ್ ನಿರ್ಮಿಸಿಕೊಂಡು ಅಲ್ಲೇ ವಾಸವಾಗಿದ್ದರು. ಗೋಡೆ ಕುಸಿಯುತ್ತಿದ್ದಂತೆ ಪ್ರಾಣ ರಕ್ಷಣೆಗೆ ಓಡಿದರೂ ಪ್ರಾಣ ಉಳಿಯಲಿಲ್ಲ. ಅಂಗಡಿಗೆ ಹೋಗಿದ್ದ ಮನೆಯ ಯಜಮಾನ ಸುರೇಶ್ ಖಾನಗಾವಿ ಮತ್ತು ಇನ್ನೊಬ್ಬ ಪುತ್ರ ಮಾತ್ರ ಬದುಕುಳಿದಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಡಗರ ಸಂಭ್ರಮದ ಮಂಗಳೂರು ದಸರಾಗೆ ಸಂಭ್ರಮದ ಚಾಲನೆ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

1 hour ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

2 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

2 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

2 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

2 hours ago