ನವದೆಹಲಿ: ಬೆಳಗಾವಿ ಉಪಚುನಾವಣೆಯಲ್ಲಿ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಂಗಳಾ ಸುರೇಶ್ ಅಂಗಡಿ, ಬಸವಕಲ್ಯಾಣಕ್ಕೆ ಶರಣು ಸಲಗಾರ್, ಮಸ್ಕಿಗೆ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡಿದೆ.
ದಿವಂಗತ ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಅವರಿಗೆ ಟಿಕೆಟ್ ಸಿಗಬಹುದು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಅಚ್ಚರಿ ನಡೆ ಅನುಸರಿಸಿದ್ದು ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್ ನೀಡಿದೆ.
ಇದನ್ನೂ ಓದಿ : ಉಡುಪಿ :ಜಿಲ್ಲೆಯಲ್ಲಿ 10117.28 ಕೋಟಿ ಸಾಲ ನೀಡಿಕೆ ಗುರಿ : ಡಾ. ನವೀನ್ ಭಟ್ -Vishwanews24
ಬಸವಕಲ್ಯಾಣಕ್ಕೆ ಶರಣು ಸಲಗಾರ್ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದರು. ಕಳೆದ ಬಾರಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ನಿರಾಕರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಏ.17 ರಂದು ಉಪಚುನಾವಣೆ ನಡೆಯಲಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…