ನವದೆಹಲಿ: ಬೆಳಗಾವಿ ಉಪಚುನಾವಣೆಯಲ್ಲಿ ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಂಗಳಾ ಸುರೇಶ್ ಅಂಗಡಿ, ಬಸವಕಲ್ಯಾಣಕ್ಕೆ ಶರಣು ಸಲಗಾರ್, ಮಸ್ಕಿಗೆ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡಿದೆ.
ದಿವಂಗತ ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಅವರಿಗೆ ಟಿಕೆಟ್ ಸಿಗಬಹುದು ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಅಚ್ಚರಿ ನಡೆ ಅನುಸರಿಸಿದ್ದು ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್ ನೀಡಿದೆ.
ಇದನ್ನೂ ಓದಿ : ಉಡುಪಿ :ಜಿಲ್ಲೆಯಲ್ಲಿ 10117.28 ಕೋಟಿ ಸಾಲ ನೀಡಿಕೆ ಗುರಿ : ಡಾ. ನವೀನ್ ಭಟ್ -Vishwanews24
ಬಸವಕಲ್ಯಾಣಕ್ಕೆ ಶರಣು ಸಲಗಾರ್ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದರು. ಕಳೆದ ಬಾರಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಖೂಬಾಗೆ ಟಿಕೆಟ್ ನಿರಾಕರಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಏ.17 ರಂದು ಉಪಚುನಾವಣೆ ನಡೆಯಲಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…