ಬೆಂಗಳೂರು: ರಾಜ್ಯದಲ್ಲಿ ಅಕಾರದಲ್ಲಿರುವ ಬಿಜೆಪಿ ಸರ್ಕಾರ ಅಸಮರ್ಥ ಮತ್ತು ಅಮಾನವೀಯ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಮೃತ ಪಟ್ಟ 70 ವರ್ಷದ ವ್ಯಕ್ತಿಯ ಮೃತ ದೇಹವನ್ನು ಸೈಕಲ್ನಲ್ಲಿ ತೆಗೆದುಕೊಂಡು ಅಂತ್ಯಸಂಸ್ಕಾರ ಮಾಡಿರುವ ಘಟನೆಯನ್ನು ಉಲ್ಲೇಖಿಸಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಳೆಯ ಪ್ರವಾಹದ ನಡುವೆಯೇ ಸಂಬಂಕರು ಕಷ್ಟ ಪಟ್ಟು ಸೈಕಲ್ನಲ್ಲಿ ಶವ ಸಾಗಿಸುತ್ತಿರುವ ವಿಡಿಯೋವನ್ನು ಡಿ.ಕೆ.ಶಿವಕುಮಾರ್ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸರ್ಕಾರ ಎಲ್ಲಿದೆ. ಶವ ಸಾಗಿಸಲು ಆಂಬ್ಯುಲೆನ್ಸ್ ಯಾಕೆ ಒದಗಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದೊಂದು ಮನುಷ್ಯತ್ವ ಇಲ್ಲದ ಅಸಮರ್ಥ ಸರ್ಕಾರ ಎಂದು ಕಿಡಿಕಾರಿದ್ದು, ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…