ಬೆಳಗಾವಿ: ತಾಲೂಕಿನ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳ ದಾರುಣ ಸಾವಿಗೆ ಹೆಚ್ಎಸ್ ಬ್ಯಾಕ್ಟೀರಿಯಾ ಕಾರಣವಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ದೃಢಪಟ್ಟಿದೆ.
ಮಾಧ್ಯಮಗಳಿಗೆ ಮೃಗಾಲಯದ ಎಸಿಎಫ್ ನಾಗರಾಜ್ ಬಾಳೆಹೊಸೂರ್ ಮಾಹಿತಿ ನೀಡಿದ್ದಾರೆ. 31 ಕೃಷ್ಣಮೃಗಗಳ ಸಾವಿಗೆ (ಗಳಲೆ) ಹಿಮೋರೆಜಿಕ್ ಸೆಪ್ಟಿಸೆಮೀಯಾ ಕಾರಣ ಎನ್ನುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಅ.13ರಿಂದ 16ರವರೆಗೆ 31 ಕೃಷ್ಣಮೃಗಗಳು ಸಾವಿಗೀಡಗಿದ್ದವು. ಕೃಷ್ಣಮೃಗಗಳ ಸಾವು ಹಿನ್ನೆಲೆ ಬನ್ನೇರುಘಟ್ಟ, ಬೆಂಗಳೂರಿನ ತಜ್ಞ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ವೈರಾಣು ತಜ್ಞ ಡಾ.ಚಂದ್ರಶೇಖರ ಅವರು ಮೃಗಾಲಯದ ಅಧಿಕಾರಿಗಳಿಗೆ ಮಾಹಿತಿ ಬಿಡುಗಡೆ ಮಾಡಿದ್ದಾರೆ.
ಕೃಷ್ಣಮೃಗಗಳು HS ಬ್ಯಾಕ್ಟೀರಿಯಾದಿಂದ ಸಾವಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಹಠಾತ್ ತಾಪಮಾನ ಕುಸಿತ, ಒತ್ತಡದಿಂದಲೂ ಕೃಷ್ಣಮೃಗಗಳ ಮರಣಕ್ಕೆ ಕಾರಣ ಅಂತಲೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಉಳಿದ ಕೃಷ್ಣಮೃಗಗಳ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದೆ. ಬದುಕುಳಿದ ಏಳು ಕೃಷ್ಣಮೃಗಗಳಿಗೆ ತೀವ್ರ ನಿಗಾದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಈಗಾಗಲೇ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಲಾಗಿದೆ. ಮೃಗಾಲಯದಲ್ಲಿರುವ ಹುಲಿ, ಸಿಂಹ, ಚಿರತೆ, ಕತ್ತೆಕಿರುಬಗಳು, ಕರಡಿಗಳು ವಿವಿಧ ಜಿಂಕೆ ಪ್ರಬೇಧಗಳಿವೆ. ತುರ್ತು ಪ್ರೋಟೋಕಾಲ್ ಜಾರಿಗೊಳಿಸುವಂತೆ ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…