ನವದೆಹಲಿ: ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತಾಕೀತು ಮಾಡಿದೆ. ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳುಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆ ವರೆಗೆ ತೆರೆದಿರುತ್ತವೆ. ಆದರೆ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.
ಕೊವೀಡ್ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ ಬಳಕೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದೆ. ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಸಹ ಎಚ್ಚರಿಕೆ ನೀಡಿದೆ.
ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…