ಬೆಳಪು ಗ್ರಾಮದ ಎಲ್ಲಾ ರಸ್ತೆಗಳ ಬದಿಯಲ್ಲಿ ಹಾಗೂ ಕೈಗಾರಿಕಾ ಪಾರ್ಕ್ನಲ್ಲಿ ಹಸಿರುವನ ಮಾಡುವ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಚಾಲನೆ ನೀಡಿದರು.
ಬೆಳಪು ಗ್ರಾಮದಲ್ಲಿ ಕಳೆದ ೨೫ ವರ್ಷಗಳಿಂದ ನಿರಂತರ ಬೃಹತ್ ವನ ಮಹೋತ್ಸವ ಕಾರ್ಯಕ್ರಮ ಜರಗುತ್ತಿದ್ದು, “ಮನೆಗೊಂದು ಮಗು ಮಗುವಿಗೊಂದು ಗಿಡ” ಯೋಜನೆ, ರೈತರ ಜಮೀನಿನಲ್ಲಿ ವನ ರಚನೆ, ಪಂಚಾಯತ್ ಕಾಡು ಪ್ರದೇಶದಲ್ಲಿ ಲಕ್ಷ ಸಸಿ ನೆಡುವ ಕಾರ್ಯಕ್ರಮ, ಶಾಲೆಯಲ್ಲಿ
“ಚಿಣ್ಣರ ವನ” ರಚನೆ, ಪ್ರತಿ ಮನೆಗೂ ಅವರ ಬೇಡಿಕೆಯಂತೆ ಉಚಿತ ಗಿಡ ನೀಡುವ ಕಾರ್ಯಕ್ರಮ ನಡೆಸುವ ಮೂಲಕ ಗ್ರಾಮವನ್ನು ಪರಿಸರ ಕಾಳಜಿಯೊಂದಿಗೆ ಹಸಿರು ಗ್ರಾಮವನ್ನಾಗಿಸುವ ಸಂಕಲ್ಪ ಹೊ0ದಲಾಗಿದೆ0ದು ಡಾ| ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಪ್ರಸಕ್ತ ವರ್ಷ ಬೆಳಪು ಗ್ರಾಮದಲ್ಲಿ ಅನುಷ್ಠಾನಗೊಳ್ಳುತ್ತಿರುವ ಅತ್ಯಾಧುನಿಕ ಸಂಶೋಧನಾ ಕೇ0ದ್ರ, ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕೈಗಾರಿಕಾ ಪಾರ್ಕ್ ಮತ್ತು ಹಿಂದೂ ರುದ್ರಭೂಮಿ ಹಾಗೂ ದಫನಭೂಮಿಯಲ್ಲಿ ಗಿಡ ನೆಡುವ ಯೋಜನೆಗೆ ಚಾಲನೆ ನೀಡಲಾಗುವುದೆಂದು ಶೆಟ್ಟಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಾಪು ಉಪ ವಲಯ ಅರಣ್ಯಾಧಿಕಾರಿಯವರಾದ ಜೀವನ್ದಾಸ್ ಶೆಟ್ಟಿ, ಗಸ್ತು ಅರಣ್ಯಪಾಲಕರಾದ ಮಂಜುನಾಥ, ಗಸ್ತು ಅರಣ್ಯಪಾಲಕರಾದ ಅಖಿಲೇಶ್ ಮತ್ತು ಪಂಚಾಯತ್ ಸದಸ್ಯರಾದ ಶ್ರೀ ಸುಲೇಮಾನ್, ಪ್ರಮುಖರಾದ ಸುದರ್ಶನ್ ಪೂಜಾರಿ, ಗಿರೀಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…