ಬೆಳಪು ಗ್ರಾಮದ ಎಲ್ಲಾ ರಸ್ತೆಗಳ ಬದಿಯಲ್ಲಿ ಹಾಗೂ ಕೈಗಾರಿಕಾ ಪಾರ್ಕ್ನಲ್ಲಿ ಹಸಿರುವನ ಮಾಡುವ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಚಾಲನೆ ನೀಡಿದರು.
ಬೆಳಪು ಗ್ರಾಮದಲ್ಲಿ ಕಳೆದ ೨೫ ವರ್ಷಗಳಿಂದ ನಿರಂತರ ಬೃಹತ್ ವನ ಮಹೋತ್ಸವ ಕಾರ್ಯಕ್ರಮ ಜರಗುತ್ತಿದ್ದು, “ಮನೆಗೊಂದು ಮಗು ಮಗುವಿಗೊಂದು ಗಿಡ” ಯೋಜನೆ, ರೈತರ ಜಮೀನಿನಲ್ಲಿ ವನ ರಚನೆ, ಪಂಚಾಯತ್ ಕಾಡು ಪ್ರದೇಶದಲ್ಲಿ ಲಕ್ಷ ಸಸಿ ನೆಡುವ ಕಾರ್ಯಕ್ರಮ, ಶಾಲೆಯಲ್ಲಿ
“ಚಿಣ್ಣರ ವನ” ರಚನೆ, ಪ್ರತಿ ಮನೆಗೂ ಅವರ ಬೇಡಿಕೆಯಂತೆ ಉಚಿತ ಗಿಡ ನೀಡುವ ಕಾರ್ಯಕ್ರಮ ನಡೆಸುವ ಮೂಲಕ ಗ್ರಾಮವನ್ನು ಪರಿಸರ ಕಾಳಜಿಯೊಂದಿಗೆ ಹಸಿರು ಗ್ರಾಮವನ್ನಾಗಿಸುವ ಸಂಕಲ್ಪ ಹೊ0ದಲಾಗಿದೆ0ದು ಡಾ| ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಪ್ರಸಕ್ತ ವರ್ಷ ಬೆಳಪು ಗ್ರಾಮದಲ್ಲಿ ಅನುಷ್ಠಾನಗೊಳ್ಳುತ್ತಿರುವ ಅತ್ಯಾಧುನಿಕ ಸಂಶೋಧನಾ ಕೇ0ದ್ರ, ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕೈಗಾರಿಕಾ ಪಾರ್ಕ್ ಮತ್ತು ಹಿಂದೂ ರುದ್ರಭೂಮಿ ಹಾಗೂ ದಫನಭೂಮಿಯಲ್ಲಿ ಗಿಡ ನೆಡುವ ಯೋಜನೆಗೆ ಚಾಲನೆ ನೀಡಲಾಗುವುದೆಂದು ಶೆಟ್ಟಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಾಪು ಉಪ ವಲಯ ಅರಣ್ಯಾಧಿಕಾರಿಯವರಾದ ಜೀವನ್ದಾಸ್ ಶೆಟ್ಟಿ, ಗಸ್ತು ಅರಣ್ಯಪಾಲಕರಾದ ಮಂಜುನಾಥ, ಗಸ್ತು ಅರಣ್ಯಪಾಲಕರಾದ ಅಖಿಲೇಶ್ ಮತ್ತು ಪಂಚಾಯತ್ ಸದಸ್ಯರಾದ ಶ್ರೀ ಸುಲೇಮಾನ್, ಪ್ರಮುಖರಾದ ಸುದರ್ಶನ್ ಪೂಜಾರಿ, ಗಿರೀಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…