ಬೆಳಪು ಗ್ರಾಮದ ಎಲ್ಲಾ ರಸ್ತೆಗಳ ಬದಿಯಲ್ಲಿ ಹಾಗೂ ಕೈಗಾರಿಕಾ ಪಾರ್ಕ್ನಲ್ಲಿ ಹಸಿರುವನ ಮಾಡುವ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ಚಾಲನೆ ನೀಡಿದರು.
ಬೆಳಪು ಗ್ರಾಮದಲ್ಲಿ ಕಳೆದ ೨೫ ವರ್ಷಗಳಿಂದ ನಿರಂತರ ಬೃಹತ್ ವನ ಮಹೋತ್ಸವ ಕಾರ್ಯಕ್ರಮ ಜರಗುತ್ತಿದ್ದು, “ಮನೆಗೊಂದು ಮಗು ಮಗುವಿಗೊಂದು ಗಿಡ” ಯೋಜನೆ, ರೈತರ ಜಮೀನಿನಲ್ಲಿ ವನ ರಚನೆ, ಪಂಚಾಯತ್ ಕಾಡು ಪ್ರದೇಶದಲ್ಲಿ ಲಕ್ಷ ಸಸಿ ನೆಡುವ ಕಾರ್ಯಕ್ರಮ, ಶಾಲೆಯಲ್ಲಿ
“ಚಿಣ್ಣರ ವನ” ರಚನೆ, ಪ್ರತಿ ಮನೆಗೂ ಅವರ ಬೇಡಿಕೆಯಂತೆ ಉಚಿತ ಗಿಡ ನೀಡುವ ಕಾರ್ಯಕ್ರಮ ನಡೆಸುವ ಮೂಲಕ ಗ್ರಾಮವನ್ನು ಪರಿಸರ ಕಾಳಜಿಯೊಂದಿಗೆ ಹಸಿರು ಗ್ರಾಮವನ್ನಾಗಿಸುವ ಸಂಕಲ್ಪ ಹೊ0ದಲಾಗಿದೆ0ದು ಡಾ| ದೇವಿಪ್ರಸಾದ್ ಶೆಟ್ಟಿ ತಿಳಿಸಿದರು.
ಪ್ರಸಕ್ತ ವರ್ಷ ಬೆಳಪು ಗ್ರಾಮದಲ್ಲಿ ಅನುಷ್ಠಾನಗೊಳ್ಳುತ್ತಿರುವ ಅತ್ಯಾಧುನಿಕ ಸಂಶೋಧನಾ ಕೇ0ದ್ರ, ಸರಕಾರಿ ಪಾಲಿಟೆಕ್ನಿಕ್ ಕಾಲೇಜು, ಕೈಗಾರಿಕಾ ಪಾರ್ಕ್ ಮತ್ತು ಹಿಂದೂ ರುದ್ರಭೂಮಿ ಹಾಗೂ ದಫನಭೂಮಿಯಲ್ಲಿ ಗಿಡ ನೆಡುವ ಯೋಜನೆಗೆ ಚಾಲನೆ ನೀಡಲಾಗುವುದೆಂದು ಶೆಟ್ಟಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಾಪು ಉಪ ವಲಯ ಅರಣ್ಯಾಧಿಕಾರಿಯವರಾದ ಜೀವನ್ದಾಸ್ ಶೆಟ್ಟಿ, ಗಸ್ತು ಅರಣ್ಯಪಾಲಕರಾದ ಮಂಜುನಾಥ, ಗಸ್ತು ಅರಣ್ಯಪಾಲಕರಾದ ಅಖಿಲೇಶ್ ಮತ್ತು ಪಂಚಾಯತ್ ಸದಸ್ಯರಾದ ಶ್ರೀ ಸುಲೇಮಾನ್, ಪ್ರಮುಖರಾದ ಸುದರ್ಶನ್ ಪೂಜಾರಿ, ಗಿರೀಶ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…