Featured

ಬೆಳಪು ಕೈಗಾರಿಕಾ ಪಾರ್ಕಿನಲ್ಲಿ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ – vishwanews24

ಬೆಳಪು ಕೈಗಾರಿಕಾ ಪಾರ್ಕಿನಲ್ಲಿ ಕೆ.ಐ.ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ

10ನೇ ಸೆಪ್ಟೆಂಬರ್ 2024 ರಂದು ಬೆಳಪು ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ಪಣಿಯೂರು ಇಂದ ಬೆಳಪುವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕುರಿತು ಸಭೆ ಎಸ್ ಎನ್ ಕ್ರಯೋಜೆನಿಕ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಜರಗಿತು .

ಬೆಳಪು ಕೈಗಾರಿಕಾ ಪ್ರದೇಶದಲ್ಲಿ ಸುಮಾರು 54 ಕೈಗಾರಿಕಾ ಕೇಂದ್ರಗಳು ಪ್ರಾರಂಭಗೊಳ್ಳಲಿದ್ದು ಈಗಾಗಲೇ ಹಲವಾರು ಸಣ್ಣ ಕೈಗಾರಿಕೆಗಳು ಪ್ರಾರಂಭವಾಗಿದ್ದು ಪಣಿಯೂರಿನಿಂದ ಬೆಳಪುವಿಗೆ ಬರುವ ಸಂಪರ್ಕ ರಸ್ತೆ ತೀರಾ ಹದೆಗಟ್ಟಿದ್ದು ಇದರ ಅಗಲೀಕರಣ ಗೊಳಿಸಲು ಅಭಿವೃದ್ಧಿಪಡಿಸಲು ಸುಮಾರು 6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯನ್ನು KiADB ಯವರು ಸಿದ್ಧಪಡಿಸಿದ್ದು ಸುಮಾರು 2.70 ಎಕರೆ ಜಾಗ ರೈತರಿಂದ ಭೂಸ್ವಾಧೀನ ಪಡಿಸಿಕೊಂಡಿದ್ದು ಗ್ರಾಮಸ್ಥರಿಗೆ ಪರಿಹಾರ ನೀಡದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೆಳಪು ದೇವಿ ಪ್ರಸಾದ್ ಶೆಟ್ಟಿ ಅವರು ತಕ್ಷಣ ಪರಿಹಾರವನ್ನು ರೈತರಿಗೆ ನೀಡಿ ಎಲ್ಲಾ ಸಣ್ಣ ಕೈಗಾರಿಕೆಗಳು ತೀರಾ ನಷ್ಟದಲ್ಲಿ ಇರುವುದರಿಂದ ರಸ್ತೆ ಅಭಿವೃದ್ಧಿಪಡಿಸಿ 6 ಕೋಟಿ ಹೊರೆಯನ್ನ ಕೈಗಾರಿಕಾ ಮಾಲಕರಿಗೆ ಹಾಕುವುದು ಸೂಕ್ತವಲ್ಲ ಇದನ್ನು ಸರಕಾರ, ಸಂಸದರು ,ಶಾಸಕರ ಗಮನಕ್ಕೆ ತಂದು ರಸ್ತೆ ಅಭಿವೃದ್ಧಿಗೊಳಿಸಲು ಕಾರ್ಯ ಮಾಡುತ್ತೇನೆ ಎಂದು ಶೆಟ್ಟಿ ಅವರು ತಿಳಿಸಿದರು.

ಕೈಗಾರಿಕಾ ಪ್ರದೇಶದಲ್ಲಿ ನಿರ್ವಹಣೆ ,ತ್ಯಾಜ್ಯ , ಹರಿಯುವ ನೀರಿನ ಚರಂಡಿಗಳು ಸರಿಯಾಗಿ ಇಲ್ಲದ ಕಾರಣ ರೈತರ ಜಮೀನಿಗೆ ನೀರು ನುಗ್ಗಿ ಕೃತಕ ನೆರೆ ಉದ್ಭವವಾಗಿರುತ್ತದೆ ಎಂದು ಕೆಇಡಿಬಿಯ ಅಧಿಕಾರಿಗಳ ಗಮನಕ್ಕೆ ತಂದರು ಅಲ್ಲದೆ ಶಿವಾಲಯದಿಂದ ಜನರಿಗೆ ಬೆಳಪು ವಿಗೆ ಕಾಲುದಾರಿಯಲ್ಲಿ ಸಂಚರಿಸಲು ಅವಕಾಶ ನೀಡಬೇಕು , ಕೆಐಎಡಿಬಿ ವಲಯದಲ್ಲಿರುವ ಶಿವಾಲಯದ ಅಭಿವೃದ್ಧಿಗೆ ಕೈಗಾರಿಕಾ ಪ್ರದೇಶದ ಮಾಲಕರು ಕೈಜೋಡಿಸಬೇಕು, ಸ್ಥಳೀಯರಿಗೆ ಉದ್ಯೋಗ ಅವಕಾಶವನ್ನು ನೀಡಬೇಕಾಗಿ ಕಾರ್ಖಾನೆಯ ಮಾಲಕರಲ್ಲಿ ವಿನಂತಿಸಿದ್ದರು.

ಕೈಗಾರಿಕಾ ಪ್ರದೇಶದ ವಿವಿಧ ಸಮಸ್ಯೆಗಳ ಬಗ್ಗೆ ಹಾಗೂ ಕೈಗಾರಿಕಾ ಸ್ಥಳಗಳ ಕ್ರಯಾಸಾದನವನ್ನ ಮಾಡಿ ಕೈಗಾರಿಕಾ ಮಾಲೀಕರಿಗೆ ನೀಡಬೇಕಾಗಿ ಎಸ್ ಎನ್ ಕ್ರಯೋಯೋಜನಿಕ್ಸ್ ನ ಮ್ಯಾನೇಜಿಂಗ್ ಡೈರೆಕ್ಟರ್ ನಟರಾಜ ಹೆಗ್ಡೆ ಕೆ ಐ ಡಿ ಬಿ ಯ ಅಧಿಕಾರಿಗಳ ಗಮನಕ್ಕೆ ತಂದರು.

ಕೈಗಾರಿಕಾ ಪ್ರದೇಶದಲ್ಲಿ ವಾಸಿಸುವ ಬಡ ಜನರಿಗೆ ಸರಕಾರದ ತೀರ್ಮಾನದಂತೆ ಗುಡಿ ಕೈಗಾರಿಕಾ ಯೋಜನೆ ಅಡಿಯಲ್ಲಿ ವಾಸಿಸುತ್ತಿದ್ದ ಸ್ಥಳವನ್ನು ಮಂಜೂರು ಮಾಡಿ ಕೊಡಿಸುವಂತೆ , ಅಲ್ಲದೆ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ತೆರಿಗೆಯನ್ನು ಗ್ರಾಮ ಪಂಚಾಯಿತಿಗೆ ಪಾವತಿಸುವಂತೆ ಡಾ ದೇವಿ ಪ್ರಸಾದ್ ಶೆಟ್ಟಿ ಅವರು ವಿನಂತಿಸಿದ್ದು ಇದಕ್ಕೆ KIADB ಹಾಗೂ ಕೈಗಾರಿಕಾ ಇಲಾಖೆ ಅಧಿಕಾರಿಗಳು ಧ್ವನಿಗೂಡಿಸಿದ್ದರು.

ಆರು ಕೋಟಿ ವೆಚ್ಚದಲ್ಲಿ ಕೈಗಾರಿಕಾ ರಸ್ತೆ ಅಭಿವೃದ್ಧಿಪಡಿಸುವ ಮೊತ್ತವನ್ನು ಕೈಗಾರಿಕಾ ಮಾಲೀಕರಿಗೆ ಹೊರೆಯಾಗದ ರೀತಿಯಲ್ಲಿ ಸರಕಾರ ಬರಿಸುವಂತೆ ಮಾನ್ಯ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ ಯ ವರಲ್ಲಿ ಗ್ರಾಮೀಣ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಅಭಿವೃದ್ಧಿಪಡಿಸುವಂತೆ ದೂರವಾಣಿ ಮುಖಾಂತರ ಮಾತನಾಡಿದ ಶೆಟ್ಟಿ ಅವರು ಅದಕ್ಕೆ ಸಂಸದರು ಒಪ್ಪಿಗೆಯನ್ನ ನೀಡಿದ್ದು ಕಾಪಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಯವರು ರಸ್ತೆ ಕಾಮಗಾರಿಗೆ ಸ್ಪಂದಿಸುವುದಾಗಿ ಭರವಸೆಯನ್ನು ನೀಡಿದರು .

ಬೆಳಪು ಕೈಗಾರಿಕಾ ಪ್ರದೇಶದ ಕೈಗಾರಿಕಾ ವಲಯದ ಮಾಲಕರು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ರಾಜು, ಸಹಾಯಕ ಆಯುಕ್ತರು, ವಿಶೇಷ ಭೂಸ್ವಾಧೀನ ಅಧಿಕಾರಿ, ಶ್ರೀ ನಾಗರಾಜ್, ಜಂಟಿ ನಿರ್ದೇಶಕರು, ಡಿಐಸಿ ಉಡುಪಿ,
ಶ್ರೀ ಸೀತಾರಾಮ ಶೆಟ್ಟಿ ಡಿಐಸಿ ಉಡುಪಿ, ಕೆಐಡಿಬಿಯ ಅಧಿಕಾರಿಗಳಾದ ದತ್ತಾತ್ರಿ. ಇಂಜಿನಿಯರ್ ಗಣಪತಿ ,ರತ್ನಾಕರ್, ಹಾಗೂ ಕೈಗಾರಿಕಾ ಪ್ರದೇಶದ ಮಾಲಕರುಗಳಾದ ವಸಂತ ಹೆಗ್ಡೆ, ಹರೀಶ್ ನಾಯಕ್ ಕಾಪು ,ಸುಧಾಕರ್ ಶೆಟ್ಟಿ ಮಕರ, ದಿನಕರ್ ಬಾಬು, ಕಿರಣ್ ಹೆಗ್ಡೆ, ಭೂಷಣ್ ರಾವ್, ನಾಗರಾಜ್ ಪ್ರಭು, ಸುರೇಶ್ ಶೆಟ್ಟಿ ಅಯೋಧ್ಯಾ,ದುರ್ಗಾ ನಾಯ್ಕ, ಇನ್ನಿತರರು ಉಪಸ್ಥಿತರಿದ್ದರು

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

22 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

23 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

24 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

24 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

24 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

24 hours ago