ಬೆಳಪು ಗ್ರಾಮದ ಅಭಿವೃದ್ಧಿಗೆ ಸೂಕ್ತ ಅನುದಾನ ಗ್ರಾಮ ಸಭೆಯಲ್ಲಿ ಶಾಸಕ ಲಾಲಾಜಿ ಮೆಂಡನ್.
ಬೆಳಪು ಗ್ರಾಮದ ಅಭಿವೃದ್ಧಿಗೆ ಸೂಕ್ತ ಅನುದಾನ ಬೆಳಪು ಗ್ರಾಮ ಸಭೆಯಲ್ಲಿ ಶಾಸಕ ಲಾಲಾಜಿ ಮೆಂಡನ್.
ಕಾಪು: ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆಯಾದಲ್ಲಿ ಬೆಳಪು ಗ್ರಾಮ ಜಿಲ್ಲೆಯಲ್ಲಿ ಪ್ರಧಾನ ವಿದ್ಯಾಕ್ಷೇತ್ರವಾಗಿ ಮೂಡಿಬರಲಿದೆ. ಹಾಗಾಗಿ ಬೆಳಪು ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕನಾಗಿ ಸೂಕ್ತ ಅನುದಾನ ನೀಡಲು ಬದ್ಧ ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.
ಅವರು ಬೆಳಪು ಗ್ರಾಮ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಿಸಿ ಮಾತಾನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳಪು ಪಂಚಾಯತ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ , ಬೆಳಪು ಗ್ರಾಮ ರಾಜಕೀಯ ರಹಿತವಾಗಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ ಮತ್ತು ಕಸ ವಿಲೇವಾರಿ ಮಾಡಲು ಬೇಕಾದ ಎಲ್ಲಾ ವ್ಯವಸ್ಥೆಯನ್ನ ಪಂಚಾಯತ್ ವ್ಯಾಪ್ತಿಯಲ್ಲಿಯೇ ಸ್ಥಾಪಿಸಲಾಗಿದೆ ಆದರೂ ಜನ ರಸ್ತೆ ಬದಿಗೆ ತ್ಯಾಜ್ಯಗಳನ್ನ ಎಸೆಯುತ್ತಿರುವುದು ಅನಾಗರಿಕ ವರ್ತನೆ ಎಂದರು. ಉಪಸ್ಥಿತರಿದ್ದ ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿಗಳನ್ನು ನೀಡಿದರು. ಪಶು ಸಂಗೋಪನ ಇಲಾಖಾ ಸಹಾಯಕ ನಿರ್ದೇಶಕ ಡಾ: ದಯಾನಂದ್ ಪೈ ನೋಡಲ್ ಅಧಿಕಾರಿಯಾಗಿದ್ದರು. ಸಹಾಯಕ ಕೃಷಿ ಅಧಿಕಾರಿ ಶೇಖರ್ ಪಿ, ಗ್ರಾಮ ಲೆಕ್ಕಿಗ ಗಣೇಶ್ ಮೇಸ್ತ ,ತೋಟಗಾರಿಕ ಸಹಾಯಕಿ ಶ್ವೇತಾ ಹಿರೇಮಠ್, ಉಪಾದ್ಯಕ್ಷೆ ಶೋಭಾ ಭಟ್ , ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ
ಅಧಿüಕಾರಿಗಳು ಉಪಸ್ಥಿತರಿದ್ದರು.

