ಬೆಳಪು ಗ್ರಾಮದ ಅಭಿವೃದ್ಧಿಗೆ ಸೂಕ್ತ ಅನುದಾನ ಬೆಳಪು ಗ್ರಾಮ ಸಭೆಯಲ್ಲಿ ಶಾಸಕ ಲಾಲಾಜಿ ಮೆಂಡನ್.
ಕಾಪು: ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆಯಾದಲ್ಲಿ ಬೆಳಪು ಗ್ರಾಮ ಜಿಲ್ಲೆಯಲ್ಲಿ ಪ್ರಧಾನ ವಿದ್ಯಾಕ್ಷೇತ್ರವಾಗಿ ಮೂಡಿಬರಲಿದೆ. ಹಾಗಾಗಿ ಬೆಳಪು ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕನಾಗಿ ಸೂಕ್ತ ಅನುದಾನ ನೀಡಲು ಬದ್ಧ ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.
ಅವರು ಬೆಳಪು ಗ್ರಾಮ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಿಸಿ ಮಾತಾನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳಪು ಪಂಚಾಯತ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ , ಬೆಳಪು ಗ್ರಾಮ ರಾಜಕೀಯ ರಹಿತವಾಗಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ ಮತ್ತು ಕಸ ವಿಲೇವಾರಿ ಮಾಡಲು ಬೇಕಾದ ಎಲ್ಲಾ ವ್ಯವಸ್ಥೆಯನ್ನ ಪಂಚಾಯತ್ ವ್ಯಾಪ್ತಿಯಲ್ಲಿಯೇ ಸ್ಥಾಪಿಸಲಾಗಿದೆ ಆದರೂ ಜನ ರಸ್ತೆ ಬದಿಗೆ ತ್ಯಾಜ್ಯಗಳನ್ನ ಎಸೆಯುತ್ತಿರುವುದು ಅನಾಗರಿಕ ವರ್ತನೆ ಎಂದರು. ಉಪಸ್ಥಿತರಿದ್ದ ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿಗಳನ್ನು ನೀಡಿದರು. ಪಶು ಸಂಗೋಪನ ಇಲಾಖಾ ಸಹಾಯಕ ನಿರ್ದೇಶಕ ಡಾ: ದಯಾನಂದ್ ಪೈ ನೋಡಲ್ ಅಧಿಕಾರಿಯಾಗಿದ್ದರು. ಸಹಾಯಕ ಕೃಷಿ ಅಧಿಕಾರಿ ಶೇಖರ್ ಪಿ, ಗ್ರಾಮ ಲೆಕ್ಕಿಗ ಗಣೇಶ್ ಮೇಸ್ತ ,ತೋಟಗಾರಿಕ ಸಹಾಯಕಿ ಶ್ವೇತಾ ಹಿರೇಮಠ್, ಉಪಾದ್ಯಕ್ಷೆ ಶೋಭಾ ಭಟ್ , ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ
ಅಧಿüಕಾರಿಗಳು ಉಪಸ್ಥಿತರಿದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…