ಬೆಳಪು ಗ್ರಾಮದ ಅಭಿವೃದ್ಧಿಗೆ ಸೂಕ್ತ ಅನುದಾನ ಬೆಳಪು ಗ್ರಾಮ ಸಭೆಯಲ್ಲಿ ಶಾಸಕ ಲಾಲಾಜಿ ಮೆಂಡನ್.
ಕಾಪು: ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆಯಾದಲ್ಲಿ ಬೆಳಪು ಗ್ರಾಮ ಜಿಲ್ಲೆಯಲ್ಲಿ ಪ್ರಧಾನ ವಿದ್ಯಾಕ್ಷೇತ್ರವಾಗಿ ಮೂಡಿಬರಲಿದೆ. ಹಾಗಾಗಿ ಬೆಳಪು ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕನಾಗಿ ಸೂಕ್ತ ಅನುದಾನ ನೀಡಲು ಬದ್ಧ ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.
ಅವರು ಬೆಳಪು ಗ್ರಾಮ ಪಂಚಾಯತ್ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ಸಹಾಯಧನ ಚೆಕ್ ವಿತರಿಸಿ ಮಾತಾನಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೆಳಪು ಪಂಚಾಯತ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ , ಬೆಳಪು ಗ್ರಾಮ ರಾಜಕೀಯ ರಹಿತವಾಗಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ ಮತ್ತು ಕಸ ವಿಲೇವಾರಿ ಮಾಡಲು ಬೇಕಾದ ಎಲ್ಲಾ ವ್ಯವಸ್ಥೆಯನ್ನ ಪಂಚಾಯತ್ ವ್ಯಾಪ್ತಿಯಲ್ಲಿಯೇ ಸ್ಥಾಪಿಸಲಾಗಿದೆ ಆದರೂ ಜನ ರಸ್ತೆ ಬದಿಗೆ ತ್ಯಾಜ್ಯಗಳನ್ನ ಎಸೆಯುತ್ತಿರುವುದು ಅನಾಗರಿಕ ವರ್ತನೆ ಎಂದರು. ಉಪಸ್ಥಿತರಿದ್ದ ವಿವಿಧ ಇಲಾಖಾಧಿಕಾರಿಗಳು ಇಲಾಖಾ ಮಾಹಿಗಳನ್ನು ನೀಡಿದರು. ಪಶು ಸಂಗೋಪನ ಇಲಾಖಾ ಸಹಾಯಕ ನಿರ್ದೇಶಕ ಡಾ: ದಯಾನಂದ್ ಪೈ ನೋಡಲ್ ಅಧಿಕಾರಿಯಾಗಿದ್ದರು. ಸಹಾಯಕ ಕೃಷಿ ಅಧಿಕಾರಿ ಶೇಖರ್ ಪಿ, ಗ್ರಾಮ ಲೆಕ್ಕಿಗ ಗಣೇಶ್ ಮೇಸ್ತ ,ತೋಟಗಾರಿಕ ಸಹಾಯಕಿ ಶ್ವೇತಾ ಹಿರೇಮಠ್, ಉಪಾದ್ಯಕ್ಷೆ ಶೋಭಾ ಭಟ್ , ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ
ಅಧಿüಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…
ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…
ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…
ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ .. ಪೊಲೀಸರಿಂದ ಆರೋಪಿಗಳ…
ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…
ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…