ಕಾಪು ತಾಲೂಕಿನ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ದನಗಳ್ಳರ ಹಾವಳಿ ಜಾಸ್ತಿಯಾಗುತ್ತಿದ್ದು, ಯುವಕರು ರಸ್ತೆ ಬದಿಗಳಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರು ಬರುತ್ತಿದ್ದು, ಪೊಲೀಸ್ ಇಲಾಖೆ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಮಾನ್ಯ ಪೊಲೀಸ್ ಠಾಣಾಧಿಕಾರಿಯವರಿಗೆ ಮತ್ತು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಮಾಡಲಾಗಿದೆಂದು ಬೆಳಪು ಗ್ರಾ.ಪಂ ಅಧ್ಯಕ್ಷರಾದ ಡಾ|ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಬೆಳಪು ಗ್ರಾಮದಲ್ಲಿ 7 ದನಗಳ ಕಳವು ಆಗಿರುವ ಬಗ್ಗೆ ತಿಳಿದು ಬಂದಿದ್ದು, 2 ದಿನಗಳ ಹಿಂದೆ ಗುರುರಾಜ್ ಆಚಾರ್ಯ ದಂಪತಿಗಳ ಮನೆಯ ಹಟ್ಟಿಗೆ ದನಕಳ್ಳರು ನುಗ್ಗಿದ್ದು ಮನೆ ಮಾಲಕರು ಎಚ್ಚರವಾದಾಗ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ವಿಚಾರ ತಿಳಿದ ತಕ್ಷಣ ತಡರಾತ್ರಿ ಅವರ ಮನೆಗೆ ತೆರಳಿ ಧೈರ್ಯ ತುಂಬಿದ್ದು, ಯಾವುದೇ ಒತ್ತಡಕ್ಕೆ ಮಣಿಯದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಗ್ರಾಮಸ್ಥರು ಎಚ್ಚರ ವಹಿಸುವಂತೆ ಹೇಳಿದ್ದಾರೆ.
ಇದು ಅತ್ಯಂತ ಗಂಭೀರ ವಿಚಾರವಾಗಿರುವುದರಿಂದ ನಮ್ಮ ಗ್ರಾಮಕ್ಕೆ ಕಳಂಕವಾಗುತ್ತದೆ. ಊರಿನ ಯುವಕರು ಮತ್ತು ಸಂಘ ಸಂಸ್ಥೆಯವರು ಗಸ್ತು ತಿರುಗುವಂತೆ ಮನವಿ ಮಾಡಿದ್ದು, ಗ್ರಾಮದಲ್ಲಿ ಗಾಂಜಾ ಸೇವನೆ ಬಗ್ಗೆ ಎಚ್ಚರ ವಹಿಸಬೇಕಾಗಿದ್ದು, ತಡರಾತ್ರಿ ರಸ್ತೆ ಬದಿಯಲ್ಲಿ ಅನಗತ್ಯ ತಿರುಗುವ ಯುವಕರ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳಬೇಕು. ಪರಿಸ್ಥಿತಿ ಕೈಮೀರುವ ಮೊದಲು ಕಠಿಣ ಕ್ರಮಕೈಗೊಳ್ಳದಿದ್ದಲ್ಲಿ ಮುಂದೆ ಅಶಾಂತಿಗೆ ಕಾರಣವಾಗುತ್ತದೆಂದು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರಿನಲ್ಲಿ ತಿಳಿಸಲಾಗಿದೆಂದು ಶೆಟ್ಟಿ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…