ಕಾಪು: ಬೆಳಪು ಸಿ.ಎ ಬ್ಯಾಂಕ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಹಾಗೂ ಬ್ಯಾಂಕಿನ ಪಿಗ್ಮಿ ಸಂಗ್ರಹಕರಿಗೆ ನಗದು ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತಾನಾಡಿ” ಕೊರೋನಾ ಎನ್ನುವ ಮಹಾಮಾರಿ ಇಡೀ ವಿಶ್ವವನ್ನೇ ವ್ಯಾಪಿಸಿ ಮನುಕುಲದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು ಮನುಷ್ಯ ಮನುಷ್ಯನನ್ನೆ ಅನುಮಾನದಿಂದ ನೋಡುವ ಕಾಲ ಎದುರಾಗಿತ್ತು ಅಂತಹ ಸಮಯದಲ್ಲಿ ಸ್ವಾರ್ಥ ರಹಿತವಾಗಿ ಸಮಾಜಕ್ಕೆ ಮತ್ತು ಕೊರೋನಾದ ವಿರುದ್ಧ ವಾರಿಯರ್ಸ್ ರೀತಿಯಲ್ಲಿ ಕಾರ್ಯ ಮಾಡಿರುವಲ್ಲಿ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರವಾಗಿದೆ.
ಕೆಲವೊಂದು ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ವಿರುದ್ಧ ಹಲ್ಲೆ ನಡೆದ ಸಂಧರ್ಭದಲ್ಲಿ ಕೂಡ ಹಿಂಜರಿಯದೆ ಸಮಾಜದ ಒಳಿತಿಗಾಗಿ ಕೆಲಸ ಮಾಡಿದ ಕಾರ್ಯಕರ್ತೆಯರನ್ನು ಗುರುತಿಸುವುದು ಧರ್ಮ ಮತ್ತು ಕರ್ತವ್ಯ ಎಂಬ ದೃಷ್ಟಿಯಿಂದ ಬೆಳಪು ಸಹಕಾರಿ ವ್ಯವಸಾಯ ಸಂಘದ ವತಿಯಿಂದ ಗೌರವಾರ್ಥವಾಗಿ ನಗದು ಪ್ರೋತ್ಸಾಹ ಧನ ವಿತರಣೆ ಮಾಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ಯು.ಸಿ ಶೇಖಬ್ಬ ಉಪಾಧ್ಯಕ್ಷ ಶ್ರೀ ವತ್ಸರಾವ್,ನಿರ್ದೇಶಕರಾದ ಮೋಹನ್ ರಾವ್,ಪಾಂಡು ಶೇರಿಗಾರ,ಅಲಿಯಬ್ಬ,ಗೋಪಾಲ ಪೂಜಾರಿ,ಸೈಮನ್ ಡಿಸೋಜ,ಪಾಂಡು ಶೆಟ್ಟಿ,ಶ್ರೀಮತಿ ವೇದಾವತಿ ಕುಂದರ್,ಮೀನ ಪೂಜಾರಿ, ಶ್ರೀಮತಿ ವಿಮಲ ಅಂಚನ್,ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಲೋಚನ ಉಪಸ್ಥಿತರಿದ್ದರು
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…