ಕಾಪು: ಬೆಳಪು ಸಿ.ಎ ಬ್ಯಾಂಕ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಹಾಗೂ ಬ್ಯಾಂಕಿನ ಪಿಗ್ಮಿ ಸಂಗ್ರಹಕರಿಗೆ ನಗದು ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತಾನಾಡಿ” ಕೊರೋನಾ ಎನ್ನುವ ಮಹಾಮಾರಿ ಇಡೀ ವಿಶ್ವವನ್ನೇ ವ್ಯಾಪಿಸಿ ಮನುಕುಲದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು ಮನುಷ್ಯ ಮನುಷ್ಯನನ್ನೆ ಅನುಮಾನದಿಂದ ನೋಡುವ ಕಾಲ ಎದುರಾಗಿತ್ತು ಅಂತಹ ಸಮಯದಲ್ಲಿ ಸ್ವಾರ್ಥ ರಹಿತವಾಗಿ ಸಮಾಜಕ್ಕೆ ಮತ್ತು ಕೊರೋನಾದ ವಿರುದ್ಧ ವಾರಿಯರ್ಸ್ ರೀತಿಯಲ್ಲಿ ಕಾರ್ಯ ಮಾಡಿರುವಲ್ಲಿ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರವಾಗಿದೆ.
ಕೆಲವೊಂದು ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರ ವಿರುದ್ಧ ಹಲ್ಲೆ ನಡೆದ ಸಂಧರ್ಭದಲ್ಲಿ ಕೂಡ ಹಿಂಜರಿಯದೆ ಸಮಾಜದ ಒಳಿತಿಗಾಗಿ ಕೆಲಸ ಮಾಡಿದ ಕಾರ್ಯಕರ್ತೆಯರನ್ನು ಗುರುತಿಸುವುದು ಧರ್ಮ ಮತ್ತು ಕರ್ತವ್ಯ ಎಂಬ ದೃಷ್ಟಿಯಿಂದ ಬೆಳಪು ಸಹಕಾರಿ ವ್ಯವಸಾಯ ಸಂಘದ ವತಿಯಿಂದ ಗೌರವಾರ್ಥವಾಗಿ ನಗದು ಪ್ರೋತ್ಸಾಹ ಧನ ವಿತರಣೆ ಮಾಡಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸದಸ್ಯ ಯು.ಸಿ ಶೇಖಬ್ಬ ಉಪಾಧ್ಯಕ್ಷ ಶ್ರೀ ವತ್ಸರಾವ್,ನಿರ್ದೇಶಕರಾದ ಮೋಹನ್ ರಾವ್,ಪಾಂಡು ಶೇರಿಗಾರ,ಅಲಿಯಬ್ಬ,ಗೋಪಾಲ ಪೂಜಾರಿ,ಸೈಮನ್ ಡಿಸೋಜ,ಪಾಂಡು ಶೆಟ್ಟಿ,ಶ್ರೀಮತಿ ವೇದಾವತಿ ಕುಂದರ್,ಮೀನ ಪೂಜಾರಿ, ಶ್ರೀಮತಿ ವಿಮಲ ಅಂಚನ್,ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಲೋಚನ ಉಪಸ್ಥಿತರಿದ್ದರು
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…