ಬೆಳಪು ಸೇವಾ ಸಹಕಾರಿ ಸಂಘದಲ್ಲಿ ಜನರಿಕ್ ಔಷಧಿ ಕೇಂದ್ರ ಸ್ಥಾಪನೆ : ದೇವಿಪ್ರಸಾದ್ ಶೆಟ್ಟಿ -Vishwanews24

ಬೆಳಪು ಸೇವಾ ಸಹಕಾರಿ ಸಂಘದಲ್ಲಿ : ಜನರಿಕ್ ಔಷಧಿ ಕೇಂದ್ರ ಸ್ಥಾಪನೆ : ದೇವಿಪ್ರಸಾದ್ ಶೆಟ್ಟಿ -Vishwanews24

ಬೆಳಪು ಸೇವಾ ಸಹಕಾರಿ ಸಂಘ ಎಲ್ಲೂರು-ಉಚ್ಚಿಲ-ಬೆಳಪು ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ಜನರಿಗೆ ಬೇಕಾಗುವ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಹಲವಾರು ಜನಪರ ಯೋಜನೆಗಳನ್ನು ಜ್ಯಾರಿಗೊಳಿಸಿದೆ. ಇದರೊಂದಿಗೆ ಇದೀಗ ಭಾರತ ಸರಕಾರದ “ಜನರಿಕ್ ಔಷಧಿ” ಕೇಂದ್ರವನ್ನು ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ರವರ ವಿಶೇಷ ಮುತುವರ್ಜಿಯಿಂದ ಸಹಕಾರಿ ರಂಗದಲ್ಲಿ ಪ್ರಥಮವಾಗಿ ಬೆಳಪು ಸಂಘದಲ್ಲಿ ಪ್ರಾರಂಭಿಸಲಾಗುವುದೆAದು ಬೆಳಪು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪುರವರು ತಿಳಿಸಿದ್ದಾರೆ.

ಭಾರತ ಸರಕಾರದ ಪ್ರಧಾನ ಮಂತ್ರಿಗಳ ಬಹು ಅಪೇಕ್ಷಿತ ಯೋಜನೆ ಗ್ರಾಮೀಣ ಭಾಗದ ಬಡಜನರಿಗೆ ಕಡಿಮೆ ದರದಲ್ಲಿ ಜೌಷಧ ಒದಗಿಸುವುದು. ಈಗಾಗಲೇ ಇದು ಅನುಷ್ಠಾನಗೊಂಡರೂ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ. ಖಾಸಗಿ ಲಾಬಿಗಳ ಒತ್ತಡದಿಂದ ಇದು ಕುಂಠಿತವಾಗಿತ್ತು. ಇದೀಗ ಡಾ| ಎಂ. ಎನ್. ರಾಜೇಂದ್ರಕುಮಾರ್‌ರವರ ಚಿಂತನೆಯೊಂದಿಗೆ

ಕರ್ನಾಟಕ ರಾಜ್ಯದ ಎಲ್ಲಾ ಸಹಕಾರಿ ಸಂಸ್ಥೆಗಳಲ್ಲಿ ‘ಜನರಿಕ್ ಔಷಧಿ ಕೇಂದ್ರ ಸ್ಥಾಪನೆ’ ಯಾದರೆ ಜನರ ಮನೆ ಬಾಗಿಲಿಗೆ ಕಡಿಮೆ ದರದಲ್ಲಿ ಎಲ್ಲಾ ಔಷಧಿಗಳು ಲಭ್ಯವಾಗುತ್ತದೆ. ಸಹಕಾರಿ ರಂಗದಲ್ಲಿ ಸೇವಾ ಮನೋಭಾವನೆಯಿಂದ ಉತ್ತಮ ಗುಣಮಟ್ಟದ ಔಷಧಿಗಳು ಲಭ್ಯವಾಗುವುದಲ್ಲದೆ ಕಟ್ಟಕಡೆಯ ಜನರಿಗೆ ತಲುಪುತ್ತದೆ. ಇದರಿಂದ ಯೋಜನೆ ಅರ್ಥಪೂರ್ಣವಾಗುತ್ತದೆಂದು ಇದೀಗ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವರಾದ ಸದಾನಂದ ಗೌಡರವರ ಸಹಕಾರದಿಂದ ಮಂಜೂರಾತಿ ದೊರಕಿದೆಂದು ಶೆಟ್ಟಿ ತಿಳಿಸಿದ್ದಾರೆ.

ಜನರಿಕ್ ಔಷಧಿ ಕೇಂದ್ರದ ಮಂಜೂರಾತಿ ಪತ್ರವನ್ನು ಮೊನ್ನೆ ಮಂಗಳೂರಿನಲ್ಲಿ ನಡೆದ ೬೭ನೇ ಸಹಕಾರಿ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಕರ್ನಾಟಕ ಸಹಕಾರಿ ಸಚಿವರಾದ ಎಸ್. ಟಿ.ಸೋಮಶೇಖರ್‌ರವರು ಬೆಳಪು ಸಿ.ಎ. ಬ್ಯಾಂಕಿನ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪುರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ ಅಧ್ಯಕ್ಷರು ಹಾಗೂ ಮಂಗಳೂರಿನ ಸಂಸದರಾದ ನಳಿನ್ ಕುಮಾರ್ ಕಟೀಲು, ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇAದ್ರಕುಮಾರ್ ರವರು, ರಾಜ್ಯ ಸಹಕಾರ ಇಲಾಖಾ ನಿಬಂಧಕರಾದ ಜಿಹಾ ಉಲ್ಲಾ, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ, ದ.ಕ. ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಂಗಳೂರು ಸಹಕಾರಿ ಯೂನಿಯನ್ ಅಧ್ಯಕ್ಷರಾದ ಕೌಶಲ್ ಪ್ರಸಾದ್ ರೈ, ಸ್ಕಾಡ್ಸ್ನ ಅಧ್ಯಕ್ಷರಾದ ರವೀಂದ್ರ ಕಾಂಬ್ಳಿ ಸಹಿತ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

9 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

18 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

27 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

34 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

57 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

1 hour ago