ಬೆಳಪು ಸೇವಾ ಸಹಕಾರಿ ಸಂಘದಲ್ಲಿ ಜನರಿಕ್ ಔಷಧಿ ಕೇಂದ್ರ ಸ್ಥಾಪನೆ : ದೇವಿಪ್ರಸಾದ್ ಶೆಟ್ಟಿ -Vishwanews24

ಬೆಳಪು ಸೇವಾ ಸಹಕಾರಿ ಸಂಘದಲ್ಲಿ : ಜನರಿಕ್ ಔಷಧಿ ಕೇಂದ್ರ ಸ್ಥಾಪನೆ : ದೇವಿಪ್ರಸಾದ್ ಶೆಟ್ಟಿ -Vishwanews24

ಬೆಳಪು ಸೇವಾ ಸಹಕಾರಿ ಸಂಘ ಎಲ್ಲೂರು-ಉಚ್ಚಿಲ-ಬೆಳಪು ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ಜನರಿಗೆ ಬೇಕಾಗುವ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಹಲವಾರು ಜನಪರ ಯೋಜನೆಗಳನ್ನು ಜ್ಯಾರಿಗೊಳಿಸಿದೆ. ಇದರೊಂದಿಗೆ ಇದೀಗ ಭಾರತ ಸರಕಾರದ “ಜನರಿಕ್ ಔಷಧಿ” ಕೇಂದ್ರವನ್ನು ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್‌ರವರ ವಿಶೇಷ ಮುತುವರ್ಜಿಯಿಂದ ಸಹಕಾರಿ ರಂಗದಲ್ಲಿ ಪ್ರಥಮವಾಗಿ ಬೆಳಪು ಸಂಘದಲ್ಲಿ ಪ್ರಾರಂಭಿಸಲಾಗುವುದೆAದು ಬೆಳಪು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪುರವರು ತಿಳಿಸಿದ್ದಾರೆ.

ಭಾರತ ಸರಕಾರದ ಪ್ರಧಾನ ಮಂತ್ರಿಗಳ ಬಹು ಅಪೇಕ್ಷಿತ ಯೋಜನೆ ಗ್ರಾಮೀಣ ಭಾಗದ ಬಡಜನರಿಗೆ ಕಡಿಮೆ ದರದಲ್ಲಿ ಜೌಷಧ ಒದಗಿಸುವುದು. ಈಗಾಗಲೇ ಇದು ಅನುಷ್ಠಾನಗೊಂಡರೂ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ. ಖಾಸಗಿ ಲಾಬಿಗಳ ಒತ್ತಡದಿಂದ ಇದು ಕುಂಠಿತವಾಗಿತ್ತು. ಇದೀಗ ಡಾ| ಎಂ. ಎನ್. ರಾಜೇಂದ್ರಕುಮಾರ್‌ರವರ ಚಿಂತನೆಯೊಂದಿಗೆ

ಕರ್ನಾಟಕ ರಾಜ್ಯದ ಎಲ್ಲಾ ಸಹಕಾರಿ ಸಂಸ್ಥೆಗಳಲ್ಲಿ ‘ಜನರಿಕ್ ಔಷಧಿ ಕೇಂದ್ರ ಸ್ಥಾಪನೆ’ ಯಾದರೆ ಜನರ ಮನೆ ಬಾಗಿಲಿಗೆ ಕಡಿಮೆ ದರದಲ್ಲಿ ಎಲ್ಲಾ ಔಷಧಿಗಳು ಲಭ್ಯವಾಗುತ್ತದೆ. ಸಹಕಾರಿ ರಂಗದಲ್ಲಿ ಸೇವಾ ಮನೋಭಾವನೆಯಿಂದ ಉತ್ತಮ ಗುಣಮಟ್ಟದ ಔಷಧಿಗಳು ಲಭ್ಯವಾಗುವುದಲ್ಲದೆ ಕಟ್ಟಕಡೆಯ ಜನರಿಗೆ ತಲುಪುತ್ತದೆ. ಇದರಿಂದ ಯೋಜನೆ ಅರ್ಥಪೂರ್ಣವಾಗುತ್ತದೆಂದು ಇದೀಗ ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವರಾದ ಸದಾನಂದ ಗೌಡರವರ ಸಹಕಾರದಿಂದ ಮಂಜೂರಾತಿ ದೊರಕಿದೆಂದು ಶೆಟ್ಟಿ ತಿಳಿಸಿದ್ದಾರೆ.

ಜನರಿಕ್ ಔಷಧಿ ಕೇಂದ್ರದ ಮಂಜೂರಾತಿ ಪತ್ರವನ್ನು ಮೊನ್ನೆ ಮಂಗಳೂರಿನಲ್ಲಿ ನಡೆದ ೬೭ನೇ ಸಹಕಾರಿ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಕರ್ನಾಟಕ ಸಹಕಾರಿ ಸಚಿವರಾದ ಎಸ್. ಟಿ.ಸೋಮಶೇಖರ್‌ರವರು ಬೆಳಪು ಸಿ.ಎ. ಬ್ಯಾಂಕಿನ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪುರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿ.ಜೆ.ಪಿ ಅಧ್ಯಕ್ಷರು ಹಾಗೂ ಮಂಗಳೂರಿನ ಸಂಸದರಾದ ನಳಿನ್ ಕುಮಾರ್ ಕಟೀಲು, ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇAದ್ರಕುಮಾರ್ ರವರು, ರಾಜ್ಯ ಸಹಕಾರ ಇಲಾಖಾ ನಿಬಂಧಕರಾದ ಜಿಹಾ ಉಲ್ಲಾ, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್, ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆ, ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ, ದ.ಕ. ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಂಗಳೂರು ಸಹಕಾರಿ ಯೂನಿಯನ್ ಅಧ್ಯಕ್ಷರಾದ ಕೌಶಲ್ ಪ್ರಸಾದ್ ರೈ, ಸ್ಕಾಡ್ಸ್ನ ಅಧ್ಯಕ್ಷರಾದ ರವೀಂದ್ರ ಕಾಂಬ್ಳಿ ಸಹಿತ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

25 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

51 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

60 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago