Featured

ಬೆಳೆಗಳ ಹಾನಿ, ಮನೆಗಳ ಹಾನಿಗೆ ಪರಿಹಾರ ಕೊಡದ ಡಿಸಿಗಳ ವಿರುದ್ಧ ಎಚ್ಚರಿಕೆ ನೀಡಿದ ಸಿಎಂ – Vishwanews24

  • ಜನರ ನಡುವೆ ಹೋಗಿ ಕೆಲಸ ಮಾಡಿ , ಕೆಳಹಂತದ ಅಧಿಕಾರಿಗಳು ಡಿಸಿಗಳಂತೆ ವರ್ತಿಸಲು ಅವಕಾಶ ಕೊಡಬೇಡಿ..
  • ಅಧಿಕಾರ ನಿಮ್ಮಲ್ಲಿ ಇದ್ದಾಗ ಇನ್ನಷ್ಟು ಮೃದುತ್ವ, ವಿನಯತೆ ತರಬೇಕು..
  • ಎಚ್ಚರಿಕೆಯಿಂದ ಆಡಳಿತದ ಕೆಲಸ ಮಾಡಿ..

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಆಡಳಿತ ಪಾಠ ಮಾಡಿದರು.

ಸಭೆಯಲ್ಲಿ, ಅತಿವೃಷ್ಟಿಯಿಂದ ಬೆಳೆಹಾನಿ,ಮನೆಗಳ ಹಾನಿ ಬಗ್ಗೆ ಪರಾಮರ್ಶೆ ನಡೆಸಲಾಯಿತು.ಜನರ ಸೇವೆ ಮಾಡುವ ಪಬ್ಲಿಕ್ ಸರ್ವೆಂಟ್ಸ್ ಜಿಲ್ಲೆಗಳಲ್ಲಿ ಅಧಿಕಾರ ಇದೆ ಎನ್ನುವುದನ್ನು ಬಿಟ್ಟು ಜನರ ಕೆಲಸ ಮಾಡಿ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂದುಕೊಂಡು ಫೀಲ್ಡಿನಲ್ಲೂ ಅದೇ ಥರ ಕೆಲಸ ಮಾಡಬೇಡಿ. ಜನರ ನಡುವೆ ಹೋಗಿ ಜನರ ಜತೆ ಕೆಲಸ ಮಾಡಿ. ಕೆಳಹಂತದ ಅಧಿಕಾರಿಗಳು ಡಿಸಿಗಳಂತೆ ವರ್ತಿಸಲು ಅವಕಾಶ ಕೊಡಬೇಡಿ. ನಿಮ್ಮ‌ಸ್ವಂತಿಕೆ, ವಿವೇಚನೆ ಬಳಸಿ ಕೆಲಸ ಮಾಡಿ. ಅಧಿಕಾರ ನಿಮ್ಮಲ್ಲಿ ಇದ್ದಾಗ ಇನ್ನಷ್ಟು ಮೃದುತ್ವ, ವಿನಯತೆ ತರಬೇಕು. ಎಚ್ಚರಿಕೆಯಿಂದ ಆಡಳಿತದ ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.

ಬೆಳೆಗಳ ಹಾನಿ,ಮನೆಗಳ ಹಾನಿಗೆ ಪರಿಹಾರ ಕೊಡದ ಡಿಸಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಸಿಎಂ, ಕೆಲಸ ಆಗಲಿಲ್ಲ ಅಂತ ಕೆಳಗಿನ ಅಧಿಕಾರಿಗಳ ಮೇಲೆ ಹಾಕಬೇಡಿ. ಕೆಲಸಗಳು ಆಗದಿರುವುದಕ್ಕೆ ನೀವೇ ಹೊಣೆ, ನಿಮ್ಮದೆ ಹೊಣೆಗಾರಿಕೆ ಎಂದು ಸಭೆಯಲ್ಲಿ ಡಿಸಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡರು.
ಕಂದಾಯ ಸಚಿವ ಆರ್. ಅಶೋಕ್, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

3 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

3 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

5 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

5 hours ago