Featured

ಬೆಳೆಗಳ ಹಾನಿ, ಮನೆಗಳ ಹಾನಿಗೆ ಪರಿಹಾರ ಕೊಡದ ಡಿಸಿಗಳ ವಿರುದ್ಧ ಎಚ್ಚರಿಕೆ ನೀಡಿದ ಸಿಎಂ – Vishwanews24

  • ಜನರ ನಡುವೆ ಹೋಗಿ ಕೆಲಸ ಮಾಡಿ , ಕೆಳಹಂತದ ಅಧಿಕಾರಿಗಳು ಡಿಸಿಗಳಂತೆ ವರ್ತಿಸಲು ಅವಕಾಶ ಕೊಡಬೇಡಿ..
  • ಅಧಿಕಾರ ನಿಮ್ಮಲ್ಲಿ ಇದ್ದಾಗ ಇನ್ನಷ್ಟು ಮೃದುತ್ವ, ವಿನಯತೆ ತರಬೇಕು..
  • ಎಚ್ಚರಿಕೆಯಿಂದ ಆಡಳಿತದ ಕೆಲಸ ಮಾಡಿ..

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಆಡಳಿತ ಪಾಠ ಮಾಡಿದರು.

ಸಭೆಯಲ್ಲಿ, ಅತಿವೃಷ್ಟಿಯಿಂದ ಬೆಳೆಹಾನಿ,ಮನೆಗಳ ಹಾನಿ ಬಗ್ಗೆ ಪರಾಮರ್ಶೆ ನಡೆಸಲಾಯಿತು.ಜನರ ಸೇವೆ ಮಾಡುವ ಪಬ್ಲಿಕ್ ಸರ್ವೆಂಟ್ಸ್ ಜಿಲ್ಲೆಗಳಲ್ಲಿ ಅಧಿಕಾರ ಇದೆ ಎನ್ನುವುದನ್ನು ಬಿಟ್ಟು ಜನರ ಕೆಲಸ ಮಾಡಿ. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂದುಕೊಂಡು ಫೀಲ್ಡಿನಲ್ಲೂ ಅದೇ ಥರ ಕೆಲಸ ಮಾಡಬೇಡಿ. ಜನರ ನಡುವೆ ಹೋಗಿ ಜನರ ಜತೆ ಕೆಲಸ ಮಾಡಿ. ಕೆಳಹಂತದ ಅಧಿಕಾರಿಗಳು ಡಿಸಿಗಳಂತೆ ವರ್ತಿಸಲು ಅವಕಾಶ ಕೊಡಬೇಡಿ. ನಿಮ್ಮ‌ಸ್ವಂತಿಕೆ, ವಿವೇಚನೆ ಬಳಸಿ ಕೆಲಸ ಮಾಡಿ. ಅಧಿಕಾರ ನಿಮ್ಮಲ್ಲಿ ಇದ್ದಾಗ ಇನ್ನಷ್ಟು ಮೃದುತ್ವ, ವಿನಯತೆ ತರಬೇಕು. ಎಚ್ಚರಿಕೆಯಿಂದ ಆಡಳಿತದ ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.

ಬೆಳೆಗಳ ಹಾನಿ,ಮನೆಗಳ ಹಾನಿಗೆ ಪರಿಹಾರ ಕೊಡದ ಡಿಸಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಸಿಎಂ, ಕೆಲಸ ಆಗಲಿಲ್ಲ ಅಂತ ಕೆಳಗಿನ ಅಧಿಕಾರಿಗಳ ಮೇಲೆ ಹಾಕಬೇಡಿ. ಕೆಲಸಗಳು ಆಗದಿರುವುದಕ್ಕೆ ನೀವೇ ಹೊಣೆ, ನಿಮ್ಮದೆ ಹೊಣೆಗಾರಿಕೆ ಎಂದು ಸಭೆಯಲ್ಲಿ ಡಿಸಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡರು.
ಕಂದಾಯ ಸಚಿವ ಆರ್. ಅಶೋಕ್, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

8 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

8 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

8 hours ago